Mallikarjun Kharge: ಜೀವನದಲ್ಲಿ ಕಷ್ಟಪಟ್ಟು ಮೇಲೆ ಬಂದವನು ನಾನು, ಒಂದಿಂಚು ಜಾಗವೂ ಕಬಳಿಸಿಲ್ಲ: ಮಲ್ಲಿಕಾರ್ಜುನ ಖರ್ಗೆ

Krishnaveni K
ಗುರುವಾರ, 3 ಏಪ್ರಿಲ್ 2025 (14:26 IST)
ನವದೆಹಲಿ: ಜೀವನದಲ್ಲಿ ಸಾಕಷ್ಟು ಕಷ್ಟಪಟ್ಟು ಮೇಲೆ ಬಂದವನು ನಾನು. ಒಂದಿಂಚು ಜಾಗವನ್ನೂ ಅಕ್ರಮವಾಗಿ ಕಬಳಿಸಿಲ್ಲ. ನನ್ನ ಮೇಲೆ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಮಾಡಿದ ಆರೋಪಕ್ಕೆ ನಾನು ಅರ್ಹನೇ ಅಲ್ಲ.ಹೀಗೆಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ವಕ್ಫ್ ಬಿಲ್ ಬಗ್ಗೆ ಚರ್ಚೆ ನಡೆಯುವಾಗ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಕಾಂಗ್ರೆಸ್ ನಾಯಕರು ವಕ್ಫ್ ಜಮೀನನ್ನು ತಮ್ಮ ಸ್ವಂತ ಹಿತಾಸಕ್ತಿಗೆ ಬಳಸಿಕೊಂಡರು. ಕಾಂಗ್ರೆಸ್ ನಾಯಕನ ಮೇಲೆಯೇ ಭೂ ಕಬಳಿಕೆ ಮಾಡಿದ ಆರೋಪವಿದೆ ಎಂದಿದ್ದಾರೆ.

ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಮೇಲೆ ವಕ್ಫ್ ಜಮೀನು ಕಬಳಿಸಿದ ಆರೋಪ ಮಾಡಿದ್ದಾರೆ. ಇದು ಖರ್ಗೆಯನ್ನು ಕೆರಳಿಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು ‘ನಾನು ಈವತ್ತು ಎದ್ದು ಮಾತನಾಡಲೇಬೇಕಾದ ಪರಿಸ್ಥಿತಿ ಬಂದಿದೆ. ಬಿಜೆಪಿ ಸಂಸದರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ.

ನಾನು ಅಕ್ರಮವಾಗಿ ಒಂದಿಂಚೂ ಜಾಗ ಕಬಳಿಸಿಲ್ಲ. ಅವರ ಆರೋಪಗಳಿಗೆ ನಾನು ಅರ್ಹನೇ ಅಲ್ಲ. ಒಂದು ವೇಳೆ ಅವರ ಆರೋಪ ಸಾಬೀತಾದರೆ ನಾನೇ ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಒಂದು ವೇಳೆ ಅವರ ಆರೋಪ ಸುಳ್ಳು ಎಂದು ಸಾಬೀತಾದರೆ ಆ ಕ್ಷಣ ಅವರು ರಾಜೀನಾಮೆ ಕೊಡಬೇಕು. ನನ್ನ ವಿರುದ್ಧ ನೀಡಿರುವ ಹೇಳಿಕೆಗೆ ಅನುರಾಗ್ ಠಾಕೂರ್ ತಕ್ಷಣವೇ ಕ್ಷಮೆ ಕೇಳಬೇಕು’ ಎಂದು ಖರ್ಗೆ ಕೆಂಡಾಮಂಡಲರಾಗಿ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments