ಸೋತರೂ ಮೋದಿ ಅಹಂಕಾರ ಕಡಿಮೆಯಾಗಿಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Krishnaveni K
ಸೋಮವಾರ, 24 ಜೂನ್ 2024 (12:54 IST)
ನವದೆಹಲಿ: ಇಂದು ಮೋದಿ 3.0 ಸರ್ಕಾರದ ಲೋಕಸಭೆ ಕಲಾಪಕ್ಕೆ ಮುನ್ನ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೈತಿಕವಾಗಿ ಸೋತರೂ ಮೋದಿ ಅಹಂಕಾರ ಕಡಿಮೆಯಾಗಿಲ್ಲ ಎಂದಿದ್ದಾರೆ.

ಹಂಗಾಮಿ ಸ್ಪೀಕರ್ ವಿಚಾರದಲ್ಲಿ ಇಂದು ಕಲಾಪಕ್ಕೆ ಆರಂಭಕ್ಕೆ ಮುನ್ನವೇ ಗದ್ದಲವೆಬ್ಬಿಸಿರುವ ವಿಪಕ್ಷಗಳು ಪ್ರತಿಭಟನಾರ್ಥವಾಗಿ ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯದಲ್ಲಿ ಭಾಗಿಯಾಗುವುದಿಲ್ಲ ಎಂದಿವೆ. ಇದರ ನಡುವೆ ಮಲ್ಲಿಕಾರ್ಜುನ ಖರ್ಗೆ ಸುದೀರ್ಘವಾಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮೋದಿ ಇಂದು ಎಂದಿಗಿಂತ ಹೆಚ್ಚು ಉದ್ದದ ಭಾಷಣ ಮಾಡಿದ್ದಾರೆ. ಇತ್ತೀಚೆಗೆ ಚುನಾವಣೆಯಲ್ಲಿ ನೈತಿಕವಾಗಿ ಮತ್ತು ರಾಜಕೀಯವಾಗಿ ಸೋತರೂ ಮೋದಿ ಅಹಂಕಾರ ಕಡಿಮೆಯಾಗಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ. ಮೋದಿ ಕೆಲವು ಮುಖ್ಯ ವಿಚಾರಗಳ ಬಗ್ಗೆ ಮೋದಿ ಮಾತನಾಡಬಹುದು ಎಂದು ಜನ ನಿರೀಕ್ಷೆಯಲ್ಲಿದ್ದರು. ನೀಟ್ ಪರೀಕ್ಷೆ ವಿಚಾರದಲ್ಲಿ ನಡೆದ ಅಕ್ರಮಗಳನ್ನು ಸರಿಪಡಿಸುವ ಬಗ್ಗೆ ಮಾತನಾಡುವ ಬದಲು ಯುವ ಜನರ ಅನುಕಂಪ ಗಿಟ್ಟಿಸಲು ಭಾಷಣ ಮಾಡುತ್ತಾರೆ. ಇತ್ತೀಚೆಗೆ ಪಶ್ಚಿಮ ಬಂಗಾಲದಲ್ಲಿ ನಡೆದ ರೈಲು ದುರಂತದ ಬಗ್ಗೆಯೂ ಮೋದಿಜಿ ಮಾತನಾಡಿಲ್ಲ. ಮಣಿಪುರ ಕಳೆದ 13 ತಿಂಗಳಿನಿಂದ ಹಿಂಸಾಚಾರದಲ್ಲಿ ಮುಳುಗಿದೆ. ಅದರ ಬಗ್ಗೆಯೂ ಮೌನವಾಗಿದ್ದಾರೆ. ಅಸ್ಸಾಂ ಪ್ರವಾಹದ ಬಗ್ಗೆಯೂ ಕ್ರಮವಿಲ್ಲ. ಪ್ರಮುಖ ವಿಚಾರದಲ್ಲಿ ಮೌನವಾಗಿರುವ ಮೋದಿಜಿ ವಿಪಕ್ಷಗಳಿಗೆ ಸಲಹೆ ನೀಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ.

50 ವರ್ಷ ಹಿಂದಿನ ತುರ್ತು ಪರಿಸ್ಥಿತಿ ಬಗ್ಗೆ ಮೋದಿಜಿ ಮಾತನಾಡುತ್ತಾರೆ. ಆದರೆ ದೇಶದಲ್ಲಿ ಕಳೆದ 10 ವರ್ಷಗಳಿಂದ ಸದ್ದಿಲ್ಲದೇ ಹೇರಲಾಗಿರುವ ತುರ್ತು ಪರಿಸ್ಥಿತಿ ಬಗ್ಗೆ ಮರೆತು ಹೋಗಿದ್ದಾರೆ. ಜನ ಮೋದಿ ಜಿ ವಿರುದ್ಧವಾಗಿ ತೀರ್ಪು ನೀಡಿದ್ದಾರೆ. ಹಾಗಿದ್ದರೂ ಅವರು ಅಧಿಕಾರಕ್ಕೆ ಬಂದಿದ್ದಾರೆ ಎಂದರೆ ಕೆಲಸ ಮಾಡಬೇಕು. ಜನರಿಗೆ ಕೆಲಸವಾಗಬೇಕು, ಘೋಷಣೆಗಳಲ್ಲ ಎನ್ನುವುದು ಅವರಿಗೇ ಅನ್ವಯವಾಗುತ್ತದೆ. ನಾವು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲಿದ್ದೇವೆ’ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನೂತನ ಸಂಸತ್ ಕಲಾಪಕ್ಕೆ ತೆರಳುವ ಮುನ್ನ ಪ್ರಧಾನಿ ಮೋದಿ ವಿಪಕ್ಷಗಳು ಘೋಷಣೆಗಳನ್ನು ಕೂಗುವುದು ಬಿಟ್ಟು ರಚನಾತ್ಮಕ ವಿಪಕ್ಷಗಳಾಗಿ ಕೆಲಸ ಮಾಡಲಿ ಎಂದಿದ್ದರು. ಅದಕ್ಕೆ ಖರ್ಗೆ ಈ ರೀತಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments