Webdunia - Bharat's app for daily news and videos

Install App

ಮುಂದಿನ ವರ್ಷ ಕೆಂಪು ಕೋಟೆಯಲ್ಲಿ ಮತ್ತೆ ಸಿಗೋಣ ಎಂದಿದ್ದ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್

Webdunia
ಬುಧವಾರ, 16 ಆಗಸ್ಟ್ 2023 (10:40 IST)
ನವದೆಹಲಿ : ಮುಂದಿನ ವರ್ಷ ಕೆಂಪು ಕೋಟೆಯಲ್ಲಿ ಸಿಗೋಣ ಎನ್ನುವ ಮೂಲಕ ಬರುವ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಗೆಲುವು ನಿಶ್ಚಿತ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿಯ ಈ ಹೇಳಿಕೆಗಳು ಅವರ ಅಹಂಕಾರವನ್ನು ತೋರಿಸುತ್ತವೆ. ಅವರು ಮುಂದಿನ ವರ್ಷ ತಮ್ಮ ಮನೆಯಲ್ಲಿ ಧ್ವಜಾರೋಹಣ ಮಾಡುತ್ತಾರೆ ಎಂದು ಖರ್ಗೆ ಕುಟುಕಿದ್ದಾರೆ. 

ನಿಮ್ಮನ್ನು ಗೆಲ್ಲಿಸುವುದು ಅಥವಾ ತಿರಸ್ಕರಿಸುವುದು ಮತದಾರರ ಕೈಯಲ್ಲಿದೆ. 2024ರಲ್ಲಿ ಮತ್ತೊಮ್ಮೆ ಧ್ವಜಾರೋಹಣ ಮಾಡುತ್ತೇನೆ ಅಂತ ಈಗಲೇ ಹೇಳುವುದು ದುರಹಂಕಾರ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಣ್ಣಿನ ಸಮಸ್ಯೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಗೈರಾಗಿದ್ದರು. ಅವರಿಗಾಗಿ ಮೀಸಲಿರಿಸಿದ್ದ ಖುರ್ಚಿ ಖಾಲಿ ಇತ್ತು.  

ನನಗೆ ಕಣ್ಣಿನ ಸಮಸ್ಯೆಯಿದೆ. ಮುಖ್ಯವಾಗಿ ಶಿಷ್ಟಾಚಾರದ ಪ್ರಕಾರ ಬೆಳಿಗ್ಗೆ 9:20 ಕ್ಕೆ ನನ್ನ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿತ್ತು. ನಂತರ ಕಾಂಗ್ರೆಸ್ ಕಚೇರಿಗೆ ಬಂದು ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿತ್ತು. ಭದ್ರತೆ ತುಂಬಾ ಬಿಗಿಯಾಗಿದ್ದರಿಂದ ನಾನು ಪಕ್ಷದ ಕಚೇರಿಗೂ ಸಮಯಕ್ಕೆ ತಲುಪಲು ಸಾಧ್ಯವಾಗಲಿಲ್ಲ ಎಂದು ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments