Webdunia - Bharat's app for daily news and videos

Install App

ತಾಕತ್ತಿದ್ರೆ ನನ್ನನ್ನು ಬಂಧಿಸಿ: ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಸವಾಲ್

Webdunia
ಮಂಗಳವಾರ, 3 ಜನವರಿ 2017 (18:50 IST)
ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಸುದೀಪ್ ಬಂಡೋಪಾಧ್ಯಾಯರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರಿಂದ ಆಕ್ರೋಶಗೊಂಡ ಟಿಎಂಸಿ ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಗೆ ತಾಕತ್ತಿದ್ರೆ ನನ್ನನ್ನು ಬಂಧಿಸಲಿ ಎಂದು ಸವಾಲ್ ಹಾಕಿದ್ದಾರೆ. 
 
ಪ್ರಧಾನಿ ಮೋದಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಗಳಿಂದ ನೋಟು ನಿಷೇಧ ವಿರೋಧಿಸುವ ತಮ್ಮ ರಾಜಕೀಯ ವಿರೋಧಿಗಳ ಮೇಲೆ ದಾಳಿ ಮಾಡಿಸುತ್ತಿದ್ದಾರೆ.ಇಂತಹ ಪೊಳ್ಳು ಬೆದರಿಕೆಗಳಿಗೆ ನಾನು ಹೆದರುವುದಿಲ್ಲ ಎಂದು ಗುಡುಗಿದ್ದಾರೆ.
 
ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರಾದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಸಿಬಿಐ ಬಂಧಿಸಿರುವುದು ಆಘಾತ ಮೂಡಿಸಿದೆ.ಪ್ರಧಾನಿ ಮೋದಿ, ತೃಣಮೂಲ ಪಕ್ಷದ ನಾಯಕರಾದ ಅಭಿಷೇಕ್ ಬ್ಯಾನರ್ಜಿ, ಸೋವನ್ ಚಟರ್ಜಿ ಮತ್ತು ಫಿರ್ಹಾದ್ ಹಕೀಮ್ ಅವರನ್ನು ಬಂಧಿಸುವ ಷಢ್ಯಂತ್ರ ರೂಪಿಸಿದ್ದಾರೆ ಎನ್ನುವ ಮಾಹಿತಿ ನನಗಿದೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿಯ ಷಡ್ಯಂತ್ರಗಳಿಂದ ಆಘಾತವಾಗಿದೆ ಆದರೆ ಹೆದರಿಕೆಯಾಗಿಲ್ಲ. ಮೋದಿಗೆ ತಾಕತ್ತಿದ್ರೆ ನನ್ನನ್ನು ಸೇರಿದಂತೆ ಎಲ್ಲಾ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರನ್ನು ಬಂಧಿಸಲಿ. ಎಷ್ಟು ಧೈರ್ಯಯಿದೆ ಎನ್ನುವುದನ್ನು ನೋಡುತ್ತೇನೆ. ಇತರರನ್ನು ಮೌನವಾಗಿಸಬಹುದು. ಆದರೆ, ನನ್ನನ್ನು ಮೌನವಾಗಿಸಲು ಸಾಧ್ಯವಿಲ್ಲ. ಜನತೆಯ ಧ್ವನಿಯನ್ನು ತುಳಿಯಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments