Webdunia - Bharat's app for daily news and videos

Install App

ಚುನಾವಣೆ ಬಂದಾಗಲೆಲ್ಲಾ ಮಮತಾ ಬ್ಯಾನರ್ಜಿಗೆ ಗಾಯ: ಇದೂ ಗಿಮಿಕ್ಕಾ ಎಂದ ಜನ

Krishnaveni K
ಶುಕ್ರವಾರ, 15 ಮಾರ್ಚ್ 2024 (08:30 IST)
Photo Courtesy: Twitter
ಕೋಲ್ಕೊತ್ತಾ: ಪಶ್ಚಿಮ ಬಂಗಾಲ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಹಣೆಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾದ ಫೋಟೋವೊಂದು ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸ್ವತಃ ತೃಣಮೂಲ ಕಾಂಗ್ರೆಸ್ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲೇ ಈ ಫೋಟೋ ಪ್ರಕಟವಾಗಿತ್ತು. ದೀದಿಗೆ ಗಂಭೀರ ಪೆಟ್ಟಾಗಿದೆ. ನಿಮ್ಮ ಪ್ರಾರ್ಥನೆಯಲ್ಲಿ ಅವರನ್ನೂ ಸೇರಿಸಿಕೊಳ್ಳಿ ಎಂದು ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿತ್ತು. ದೀದಿ ಹಣೆಯ ಮೇಲೆ ಹರಿಯುತ್ತಿರುವ ರಕ್ತ ನೋಡಿ ಎಲ್ಲರೂ ಗಾಬರಿಯಾಗಿದ್ದಂತೂ ನಿಜ.

ಆದರೆ ಕೆಲವೇ ಕ್ಷಣದಲ್ಲಿ ಇದು ದೀದಿಯ ಗಿಮಿಕ್ ಇರಬೇಕು ಎಂದು ನೆಟ್ಟಿಗರು ಸಂಶಯಿಸಿದ್ದು, ಹಳೆಯ ಫೋಟೋಗಳನ್ನು ಪ್ರಕಟಿಸಿ ಟ್ರೋಲ್ ಮಾಡಿದ್ದಾರೆ. ಹಿಂದೊಮ್ಮೆ ಚುನಾವಣೆ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಕಾಲಿಗೆ ಏಟಾಗಿತ್ತು ಎಂದು ಫೋಟೋ ಪ್ರಕಟಿಸಲಾಗಿತ್ತು. ಅವರ ಕಾಲಿಗೆ ಹಾಕಲಾಗಿದ್ದ ಬ್ಯಾಂಡೇಜ್ ನೋಡಿಯೇ ಹಲವರು ಟ್ರೋಲ್ ಮಾಡಿದ್ದರು.

ಇದೀಗ ಮತ್ತೆ ದೀದಿ ಹಣೆಯಿಂದ ರಕ್ತ ಸುರಿಯುವ ಫೋಟೋ ಪ್ರಕಟಿಸಲಾಗಿದೆ. ಇದೆಲ್ಲಾ ಜನರಿಂದ ಅನುಕಂಪ ಗಿಟ್ಟಿಸಿಕೊಳ್ಳುವ ಗಿಮಿಕ್ ಎಂದು ನೆಟ್ಟಿಗರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಇಲ್ಲದೇ ಹೋದರೆ ಚುನಾವಣೆ ಬಂದಾಗಲೇ ಈ ರೀತಿ ದಿಡೀರ್ ಆಗಿ ಗಾಯಗಳಾಗುವುದು ಹೇಗೆ ಎಂದು ಹಲವರು ಟಾಂಗ್ ಕೊಟ್ಟಿದ್ದಾರೆ.

ಮೂಲಗಳ ಪ್ರಕಾರ ಮಮತಾ ಬ್ಯಾನರ್ಜಿ ಮನೆಯಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಅವರ ಹಣೆಗೆ ಗಾಯವಾಗಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣೆಗೆ ಗಾಜಿನ ಶೋಕೇಸ್ ತಗುಲಿದ್ದರಿಂದ ಹಣೆಯಲ್ಲಿ ಗಾಯವಾಗಿದೆ ಎಂದು ಟಿಎಂಸಿ ಮೂಲಗಳಿಂಧ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments