Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Krishnaveni K
ಸೋಮವಾರ, 19 ಮೇ 2025 (11:45 IST)
ನವದೆಹಲಿ: ಕೇಂದ್ರ ಸರ್ಕಾರ ಪಾಕಿಸ್ತಾನದ ಉಗ್ರ ಪೋಷಣೆ ಬಗ್ಗೆ ವಿಶ್ವಕ್ಕೇ ಮನವರಿಕೆ ಮಾಡಲು ಸರ್ವಪಕ್ಷಗಳ ನಿಯೋಗ ರಚಿಸಿದೆ. ಈ ನಿಯೋಗ ಹಲವು ದೇಶಗಳಿಗೆ ಪ್ರವಾಸ ಮಾಡಲಿದೆ. ಆದರೆ ಈ ನಿಯೋಗದಲ್ಲಿ ನಮ್ಮ ಸಂಸದರನ್ನು ಕಳುಹಿಸಲ್ಲ ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಟಿಎಂಸಿಯಿಂದ ಸಂಸದ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ರನ್ನು ಕೇಂದ್ರ ಸರ್ಕಾರ ಅಯ್ಕೆ ಮಾಡಿತ್ತು. ಇದಕ್ಕೆ ನಮ್ಮ ಸಹಮತಿಯಿಲ್ಲ. ಯಾವುದೇ ಪಕ್ಷದ ಅನುಮತಿಯಿಲ್ಲದೇ ಆ ಪಕ್ಷದ ಸಂಸದರನ್ನು ಆಯ್ಕೆ ಮಾಡುವುದನ್ನು ನಾವು ಒಪ್ಪುವುದಿಲ್ಲ. ಈ ಕಾರಣಕ್ಕೆ ಕೇಂದ್ರ ಸರ್ಕಾರದ ಸರ್ವಪಕ್ಷ ನಿಯೋಗದಲ್ಲಿ ನಮ್ಮ ಸಂಸದರನ್ನು ಕಳುಹಿಸಲ್ಲ ಎಂದು ಮಮತಾ ಕುಂಟು ನೆಪ ಹೇಳಿದ್ದಾರೆ.

ಈಗಾಗಲೇ ಕಾಂಗ್ರೆಸ್ ನಿಂದ ಶಶಿ ತರೂರ್ ಹೆಸರನ್ನು ಕೇಂದ್ರ ಸರ್ಕಾರವೇ ಆಯ್ಕೆ ಮಾಡಿತ್ತು. ಇದೂ ಕೂಡಾ ಕಾಂಗ್ರೆಸ್ ಅಸಮಧಾನಕ್ಕೆ ಗುರಿಯಾಗಿತ್ತು. ಆದರೆ ಬಳಿಕ ತರೂರ್ ಆಯ್ಕೆಯನ್ನು ಸಮ್ಮಿತಿಸಿತ್ತು.

ಹಲವು ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗ ದೇಶ ದೇಶಗಳಿಗೆ ಹೋಗಿ ಪಾಕಿಸ್ತಾನ ಉಗ್ರವಾದಕ್ಕೆ ನೀಡುತ್ತಿರುವ ಪ್ರೋತ್ಸಾಹದ ಕುರಿತು ಮನದಟ್ಟು ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿದೆ. ಆದರೆ ಈ ನಿಯೋಗಕ್ಕೆ ಟಿಎಂಸಿ ಬೆಂಬಲ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments