Webdunia - Bharat's app for daily news and videos

Install App

ಭಯ ಯಾಕೆ, ನಮ್ಮ ರಾಜ್ಯದಲ್ಲಿ ಏನೇ ಆದ್ರೂ ವಕ್ಫ್ ಬಿಲ್ ಜಾರಿ ಮಾಡಲ್ಲ: ಮಮತಾ ಬ್ಯಾನರ್ಜಿ

Krishnaveni K
ಶನಿವಾರ, 12 ಏಪ್ರಿಲ್ 2025 (15:05 IST)
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಏನೇ ಆದರೂ ನಮ್ಮ ರಾಜ್ಯದಲ್ಲಿ ಅದನ್ನು ಜಾರಿಗೆ ತರಲ್ಲ, ಭಯ ಬೇಡ ಎಂದು ಮುಸ್ಲಿಮರಿಗೆ ಅಭಯ ನೀಡಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗೆ ವಕ್ಫ್ ತಿದ್ದುಪಡಿ ಬಿಲ್ ಪಾಸ್ ಮಾಡಿತ್ತು. ಇದಕ್ಕೆ ರಾಷ್ಟ್ರಪತಿಗಳ ಅಂಕಿತವೂ ಸಿಕ್ಕಿದ್ದು ಕಾನೂನಾಗಿದೆ. ಆದರೆ ಈ ತಿದ್ದುಪಡಿ ಬಿಲ್ ಗೆ ಇಂಡಿಯಾ ಒಕ್ಕೂಟದ ನಾಯಕರಿಂದ ವಿರೋಧವಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೂಡಾ ವಿರೋಧಿಸಿದ್ದಾರೆ.

ಈಗಾಗಲೇ ಅವರು ಯಾವುದೇ ಶಿಕ್ಷೆ ಕೊಟ್ಟರೂ ಸರಿಯೇ, ನಾವು ವಕ್ಫ್ ತಿದ್ದುಪಡಿ ಬಿಲ್ ಜಾರಿ ಮಾಡಲ್ಲ ಎಂದಿದ್ದರು. ಇದೀಗ ಪಶ್ಚಿಮ ಬಂಗಾಲದಲ್ಲಿ ಈ ಹೊಸ ಬಿಲ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಮಮತಾ, ‘ಈ ಗಲಾಟೆ, ದೊಂಬಿಗಳೆಲ್ಲಾ ಯಾಕೆ? ನಾವು ಯಾವುದೇ ಕಾರಣಕ್ಕೂ ನಮ್ಮ ರಾಜ್ಯದಲ್ಲಿ ಈ ಹೊಸ ವಕ್ಫ್ ಕಾನೂನು ಜಾರಿಗೆ ತರಲ್ಲ. ಮುಸ್ಲಿಮರು ಸೇರಿದಂತೆ ಎಲ್ಲಾ ವರ್ಗದವರು ಶಾಂತವಾಗಿರಬೇಕು. ನಮ್ಮಲ್ಲಿ ಇದನ್ನು ಜಾರಿಗೆ ತರಲ್ಲ, ಹಾಗಿರುವಾಗ ಭಯ ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments