Webdunia - Bharat's app for daily news and videos

Install App

ಪ್ರಧಾನಿ ಮೋದಿ, ತಾನೇ ಕುಳಿತ ಮರದ ಟೊಂಗೆಯನ್ನು ಕತ್ತರಿಸಿದ ಕಾಳಿದಾಸನಂತೆ: ಮಮತಾ ಬ್ಯಾನರ್ಜಿ

Webdunia
ಶುಕ್ರವಾರ, 6 ಜನವರಿ 2017 (16:21 IST)
ನೋಟು ನಿಷೇಧ ಜಾರಿಗೊಳಿಸಿದ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಕಾಳಿದಾಸನಂತೆ,ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾತ್ರ ದೇಶ ವಿನಾಶದಿಂದ ಉಳಿಸಬಹುದಾಗಿದೆ ಎಂದು ಹೇಳಿದ್ದಾರೆ.
 
ಪ್ರಸ್ತುತ ಪ್ರಧಾನಿಯಾಗಿರುವ ಮೋದಿ ಪ್ರಧಾನಿ ಸ್ಥಾನಕ್ಕೆ ಅನರ್ಹ ವ್ಯಕ್ತಿ. ಅವರು ತಾನೇ ಕುಳಿತ ಮರದ ಟೊಂಗೆಯನ್ನು ಕತ್ತರಿಸಿದ ಕಾಳಿದಾಸನಂತೆ. ನನ್ನ ಪ್ರಕಾರ ಇಂತಹ ಸ್ಥಿತಿಯಿಂದ ದೇಶವನ್ನು ರಾಷ್ಟ್ರಪತಿ ಮಾತ್ರ ಬಚಾವ್ ಮಾಡಬಲ್ಲರು ಎಂದು  ಕಿಡಿಕಾರಿದ್ದಾರೆ. 
 
ನೋಟು ನಿಷೇಧದಿಂದಾಗಿ ದೇಶದಲ್ಲಿ ಉಂಟಾಗಿರುವ ಅರಾಜಕತೆ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರಪತಿ ಮುಖರ್ಜಿ ದೇಶದಲ್ಲಿ ರಾಷ್ಟ್ರಪತಿ ಅಡಳಿತ ಹೇರುವುದು ಸೂಕ್ತ. ಒಂದು ವೇಳೆ ಆಡ್ವಾಣಿ, ರಾಜನಾಥ್ ಸಿಂಗ್ ಅಥವಾ ಅರುಣ್ ಜೇಟ್ಲಿ ಸರಕಾರವನ್ನು ಮುನ್ನಡೆಸಿದಲ್ಲಿ ನನಗೆ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ. 
 
ಕೇಂದ್ರ ಸರಕಾರದ ನೋಟು ನಿಷೇಧ ರಾಜ್ಯದಲ್ಲಿ 1.7 ಕೋಟಿ ಜನರ ಮೇಲೆ ನೇರ ಪರಿಣಾಮ ಬೀರಿದೆ. 81.5 ಲಕ್ಷ ಜನರು ನಿರುದ್ಯೋಗಿಗಳಾಗಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಮೋದಿ ವಿರುದ್ಧ ಗುಡುಗಿದ್ದಾರೆ.
 
ಭಾರತ ದೇಶ ಅಭಿವೃದ್ಧಿಯಲ್ಲಿ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ನೋಟು ನಿಷೇಧ ದೇಶದ ಆರ್ಥಿಕತೆಯನ್ನು ಅಧೋಗತಿಗೆ ಇಳಿಸಿದೆ. ರೈತರು ತುಂಬಾ ಸಂಕಷ್ಟದಲ್ಲಿದ್ದಾರೆ. ಇದರಿಂದ ಮುಂಬರುವ ದಿನಗಳಲ್ಲಿ ಅಗತ್ಯ ವಸ್ತುಗಳ ದರಗಳಲ್ಲಿ ಹೆಚ್ಚಳವಾಗಲಿದೆ. ಕೇಂದ್ರ ಸರಕಾರ ಹೊಣೆ ಹೊರಲಿದೆಯೇ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments