Webdunia - Bharat's app for daily news and videos

Install App

ಮಮತಾ ಬ್ಯಾನರ್ಜಿ ಪ್ರಧಾನಿ ಹುದ್ದೆಗೆ ಸಮರ್ಥೆ: ಮೋದಿ ಆಪ್ತ ಬಾಬಾ ರಾಮದೇವ್

Webdunia
ಗುರುವಾರ, 8 ಡಿಸೆಂಬರ್ 2016 (16:11 IST)
ಪ್ರಧಾನಿ ಮೋದಿ ನಿಕಟವರ್ತಿ, ಬಿಜೆಪಿಯ ಸಮರ್ಥಕ ಬಾಬಾ ರಾಮದೇವ್ ಬಿಜೆಪಿಯ ಕಡು ವೈರಿ ಎಂದು ಗುರುತಿಸಿಕೊಳ್ಳುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹೊಗಳುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಪ್ರಾಮಾಣಿಕತೆ ಸಂಕೇತ, ಸರಳ ವ್ಯಕ್ತಿತ್ವ ಹೊಂದಿರುವ ಅವರು ಪ್ರಧಾನಮಂತ್ರಿಯಾಗುವ ಎಲ್ಲ ಅರ್ಹತೆಗಳನ್ನು ಹೊಂದಿದ್ದಾರೆ ಎಂದು ಅವರು ಹೊಗಳಿದ್ದಾರೆ. 
"ರಾಜಕೀಯದಲ್ಲಿ ಅವರ ಅರ್ಹತೆಯಬಗ್ಗೆ ಯಾವುದೇ ಪ್ರಶ್ನೆ ಇಲ್ಲ. ಚಹಾ ಮಾರುವವನ ಮಗ ಪ್ರಧಾನಿಯಾಗುತ್ತಾನೆಂದರೆ ಮಮತಾಜಿ ಕೂಡ ಪ್ರಧಾನಿಯಾಗಲು ಅರ್ಹರು ಎಂದಿದ್ದಾರೆ ಬಾಬಾ ರಾಮದೇವ್.
 
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಬಾಬಾ, ರಾಜಕಾರಣದಲ್ಲಿ ಮಮತಾ ಪ್ರಾಮಾಣಿಕತೆ ಮತ್ತು ಸರಳತೆಯ ಸಂಕೇತ ಎನ್ನಿಸಿಕೊಳ್ಳುತ್ತಾರೆ. ನಾನು ಅವರ ಸರಳತೆಯನ್ನು ಪ್ರೀತಿಸುತ್ತೇನೆ. ಅವರು ಚಪ್ಪಲಿ ಮತ್ತು ಸಾಮಾನ್ಯ ಸೀರೆಗಳನ್ನುಡುತ್ತಾರೆ. ಅವರು ಕಪ್ಪುಹಣವನ್ನು ಹೊಂದಿಲ್ಲ ಎಂದು ನನಗೆ ನಂಬಿಕೆ ಇದೆ ಎಂದಿದ್ದಾರೆ.
 
ಈ ಹಿಂದೊಮ್ಮೆ ನಾನು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಾಗ ಎಡ ಪಕ್ಷ ಅಧಿಕಾರದಲ್ಲಿತ್ತು. ಎಡ ಪಂಥೀಯರು ಹೋಗಿ ಮಮತಾ ಅಧಿಕಾರಕ್ಕೇರಬೇಕು ಎಂದು ನಾನು ಆ ಸಂದರ್ಭದಲ್ಲಿ ಹೇಳಿದ್ದೆ. ಮತ್ತೀಗ ಅದೇ ಆಗಿದೆ ಎಂದವರು ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments