Webdunia - Bharat's app for daily news and videos

Install App

ಅತ್ಯಾಚಾರವೆಸಗಿ ಒಂಬತ್ತು ವರ್ಷಗಳ ನಂತ್ರ ಪೊಲೀಸರ ಬಲೆಗೆ ಬಿದ್ದ ಆರೋಪಿ

Webdunia
ಶುಕ್ರವಾರ, 4 ಸೆಪ್ಟಂಬರ್ 2015 (16:41 IST)
ಒಂಬತ್ತು ವರ್ಷಗಳ ಹಿಂದೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ 54 ವರ್ಷ ವಯಸ್ಸಿನ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 
 
ನಗರದ ಠಾಕೂರ್‌ಗಂಜ್ ಪ್ರದೇಶದ ಹುಸೈನ್‌ಬಾದ್ ನಿವಾಸಿಯಾಗಿದ್ದ ಆರೋಪಿ ಬಿಂದ್ರಾ ಯಾದವ್, ನೆರೆಮನೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ. ನಂತರ ಪಂಜಾಬ್‌ನ ಭಟಿಂದಾ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 
 
ಇತ್ತಿಚೆಗೆ ತನ್ನ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ನಗರಕ್ಕೆ ಆಗಮಿಸಿದ್ದಾಗ ಆರೋಪಿ ಸತ್ಯೇಂದ್ರನನ್ನು ಬಂಧಿಸಲಾಗಿದೆ ಎಂದು ಠಾಕೂರ್ ಗಂಜ್ ಪೊಲೀಸ್ ಠಾಣೆಯ ಅಧಿಕಾರಿ ಸಮರ್ ಬಹಾದೂರ್ ಯಾದವ್ ತಿಳಿಸಿದ್ದಾರೆ. 
 
ಸತ್ಯೇಂದ್ರ ಯಾದವ್, ದಲಿತ ಮಹಿಳೆ ಮನೆಯಲ್ಲಿ ಏಕಾಂಗಿಯಾಗಿದ್ದಾಗ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಲ್ಲದೇ ಯಾರಿಗಾದರೂ ತಿಳಿಸಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.    
 
ಅತ್ಯಾಚಾರಕ್ಕೊಳಗಾದ ಮಹಿಳೆ ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಆರೋಪಿ ಸತ್ಯೇಂದ್ರ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಳು. ತನ್ನ ವಿರುದ್ಧ ದೂರು ದಾಖಲಾಗಿರುವುದನ್ನು ಅರಿತ ಸತ್ಯೇಂದ್ರ ಪಂಜಾಬ್‌ನ ಭಟಿಂದಾ ನಗರಕ್ಕೆ ತೆರಳಿ ಅಲ್ಲಿಯೇ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments