Webdunia - Bharat's app for daily news and videos

Install App

ತಾಳಿ ಕಟ್ಟೋ ವೇಳೆಯಲ್ಲೇ ವರನನ್ನು ಬಂಧಿಸಿದ ಪೊಲೀಸರು! ಮುಂದೇನಾಯ್ತು?

Webdunia
ಭಾನುವಾರ, 17 ಏಪ್ರಿಲ್ 2022 (08:45 IST)
ಭೋಪಾಲ್ : ಮದುವೆ ಮಂಟಪದಿಂದ ವರ ಅಥವಾ ವಧು ಎಸ್ಕೇಪ್ ಆಗೋದು, ತಾಳಿ ಕಟ್ಟೋ ವೇಳೆ ವರ ಅಥವಾ ವಧುವಿನ ಲವ್ವರ್ ಗಲಾಟೆ ಮಾಡಿದಂತಹ ಅನೇಕ ಘಟನೆಗಳ ಸುದ್ದಿಗಳನ್ನು ಓದಿದ್ದೇವೆ.

ಆದರೆ ಇದೀಗ ಮಧ್ಯಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ.

ಹೌದು. ವರ ಇನ್ನೇನೋ ವಧುವಿಗೆ ತಾಳಿ ಕಟ್ಟಲು ಅಣಿಯಾಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಎಂಟ್ರಿ ಕೊಟ್ಟ ಪೊಲೀಸರು ವರನನ್ನು ಅರೆಸ್ಟ್ ಮಾಡಿ ಕರೆದೊಯ್ದಿದ್ದಾರೆ. ಕಾರಣ ವರ ಅತ್ಯಾಚಾರ ಪ್ರಕರಣವೊಂದರ ಆರೋಪಿ.

ಈ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ತಾಳಿ ಕಟ್ಟುವುದಕ್ಕೂ ಮನ್ನ ಮೆರವಣಿಗೆ ಹೊರಡುವುದು ಅಲ್ಲಿನ ಸಂಪ್ರದಾಯವಾಗಿದೆ. ಅಂತೆಯೇ ಹೀಗೆ ಮೆರವಣಿಗೆ ಹೊರಡಲು ತಯಾರಾಗುತ್ತಿದ್ದ ವರನನ್ನು ಜಬಲ್ಪುರ್ ಪೊಲೀಸರು ಬಂದು ಅತ್ಯಾಚಾರ ಆರೋಪದ ಮೇಲೆ ಬಂಧಿಸಿದ್ದಾರೆ. 

ಮದುವೆ ಮಾಡಿಕೊಳ್ಳುವ ನೆಪದಲ್ಲಿ ವರ, ಆತನ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ಸಂಬಂಧ ಜಬಲ್ಪುರ್ ಲಾರ್ಡ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನ ಸ್ನೇಹಿತೆಯನ್ನು ಹೋಟೆಲ್ಗೆ ಕರೆದೊಯ್ದಿದ್ದ ವರ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಳು.

ಈ ಸಂಬಂಧ ಪ್ರತಿಕ್ರಿಯಿಸಿರುವ ಪೊಲೀಸ್ ವರಿಷ್ಠಾಧಿಕಾರಿ, ವರ ಅನುಜ್ ದುಬೆ ತನ್ನ ಸ್ನೇಹಿತೆ ಮೇಲೆ ಕಳೆದ ಕೆಲ ತಿಂಗಳ ಹಿಂದೆ ಅತ್ಯಾಚಾರವೆಸಗಿದ್ದಾಗಿ ಪ್ರಕರಣ ದಾಖಲಾಗಿತ್ತು.

ಯುವತಿ ಜೊತೆ ದೇವಸ್ಥಾನವೊಂದರಲ್ಲಿ ಮದುವೆ ಕೂಡ ಮಾಡಿಕೊಂಡಿದ್ದನಂತೆ. ಈ ಬೆನ್ನಲ್ಲೇ ಆಕೆಯನ್ನು ಹೋಟೆಲ್ ಗೆ ಕರೆದೊಯ್ದು ಅತ್ಯಾಚಾರ ಎಸಗಲಾಗಿತ್ತು. ಬಳಿಕ ಬೇರೆ ಯುವತಿ ಜೊತೆ ಮದುವೆ ಮಾಡಿಕೊಳ್ಳಲು ಮುಂದಾಗಿದ್ದು, ಈ ಸಂಬಂಧ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments