Select Your Language

Notifications

webdunia
webdunia
webdunia
webdunia

ಅಣ್ಣಾ ಹಜಾರೆ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಅಣ್ಣಾ ಹಜಾರೆ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ರಾಲೇಗಣ್ ಸಿದ್ದಿ(ಮಹಾರಾಷ್ಟ್ರ) , ಶುಕ್ರವಾರ, 5 ಫೆಬ್ರವರಿ 2016 (21:47 IST)
ಹಿರಿಯ ಗಾಂಧಿವಾದಿ, ಸಮಾಜ ಸುಧಾರಕ ಅಣ್ಣಾ ಹಜಾರೆಯವರ ಕಚೇರಿಯಲ್ಲಿ ಸಾಮಾಜಿಕ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ವರದಿಯಾಗಿದೆ.
 
ಆತ್ಮಹತ್ಯೆಗೆ ಪ್ರಯತ್ನಿಸಿದ ಸಾಮಾಜಿಕ ಕಾರ್ಯಕರ್ತನನ್ನು ಬಾಲು ಎಂದು ಗುರುತಿಸಲಾಗಿದ್ದು, ಕಚೇರಿಯೊಳಗೆ ವಿಷ ಸೇವಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪಾರ್ನೇರ್ ಪೊಲೀಸರ ಸಹಾಯದಿಂದ ಕೂಡಲೇ ಬಾಲುನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅಣ್ಣಾ ಹಜಾರೆಯವರ ಬೆಂಬಲಿಗನಾದ ಬಾಲು, ಭೂಮಿ ವಿವಾದದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಲು ನಿರ್ಧರಿಸಿದ್ದ ಎನ್ನಲಾಗಿದೆ.
 
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿರಿಯ ಗಾಂಧಿವಾದಿ, ಸಮಾಜ ಸುಧಾರಕ ಅಣ್ಣಾ ಹಜಾರೆ, ಭೂಮಿ ವಿವಾದ ಪ್ರಕರಣವನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕೇ ಹೊರತು ಆತ್ಮಹತ್ಯೆ ಪರಿಹಾರವಲ್ಲ ಎಂದು ಸಲಹೆ ನೀಡಿದರು.

Share this Story:

Follow Webdunia kannada