Select Your Language

Notifications

webdunia
webdunia
webdunia
webdunia

ಮನೆ ಮುಂದೆ ಸತ್ತ ದನ ಪತ್ತೆ: ಮುಸ್ಲಿಂ ವ್ಯಕ್ತಿಗೆ ಥಳಿಸಿ ಮನೆಗೆ ಬೆಂಕಿ ಹಚ್ಚಿದ ಗುಂಪು

ಮನೆ ಮುಂದೆ ಸತ್ತ ದನ ಪತ್ತೆ: ಮುಸ್ಲಿಂ ವ್ಯಕ್ತಿಗೆ ಥಳಿಸಿ ಮನೆಗೆ ಬೆಂಕಿ ಹಚ್ಚಿದ ಗುಂಪು
ರಾಂಚಿ , ಬುಧವಾರ, 28 ಜೂನ್ 2017 (15:11 IST)
ಮನೆ ಮುಂದೆ ಸತ್ತ ದನ ಪತ್ತೆಯಾದ ಹಿನ್ನೆಲೆಯಲ್ಲಿ ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬನನ್ನ ಹಿಗ್ಗಾಮುಗ್ಗಾ ಥಳಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಾರ್ಖಂಡ್`ನ ಡಿಯೋರಿಯಲ್ಲಿ ನಡೆದಿದೆ.
 

ಪೊಲೀಸರು ಹೇಳುವ ಪ್ರಕಾರ, ಬೆಟಿಯಾ ಅತಿಯಾನಂದ್ ಹಳ್ಳಿಯಲ್ಲಿ ಉಸ್ಮಾನ್ ಅನ್ಸಾರಿ ಎಂಬುವವರ ಮನೆ ಎದುರಿಗೆ ಸತ್ತ ಹಸು ಪತ್ತೆಯಾಗಿದೆ. ಇದರಿಂದ ರೊಚ್ಚಿಗೆದ್ದ ಗುಂಪೊಂದು ಗೋಹತ್ಯೆ ಸಂಶಯ ಹಿನ್ನೆಲೆಯಲ್ಲಿ ಅನ್ಸಾರಿ ಮೇಲೆ ಹಲ್ಲೆ ನಡೆಸಿ, ಮನೆಗೆ ಬೆಂಕಿ ಹಚ್ಚಿದ್ದಾರೆ.

ಇದಾದ ಬಳಿಕವೂ ಕಲ್ಲು ತೂರಾಟ ನಡೆಸುತ್ತಿದ್ದ ಗುಂಪಿನ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ಹತೋಟಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಮನೆಯ ಮುಂದೆ ಸತ್ತ ಪ್ರಾಣಿ ಪತ್ತೆಯಾದ ಮಾತ್ರಕ್ಕೆ ಹಲ್ಲೆ ನಡೆಸುವುದು ಸರಿಯಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ


Share this Story:

Follow Webdunia kannada

ಮುಂದಿನ ಸುದ್ದಿ

ಪುಂಡನ ಮಾನ ಫೇಸ್‌ಬುಕ್‌ನಲ್ಲಿ ಹರಾಜು...!