Webdunia - Bharat's app for daily news and videos

Install App

ಫೋನ್ ಮೂಲಕ ಪತ್ನಿಗೆ ವಿಚ್ಛೇದನ

Webdunia
ಶನಿವಾರ, 15 ಅಕ್ಟೋಬರ್ 2016 (18:44 IST)
ದೇಶದಾದ್ಯಂತ ಏಕರೂಪ ನಾಗರಿಕ ನೀತಿಸಂಹಿತೆ ಮತ್ತು ವೈಯಕ್ತಿಕ ಕಾನೂನುಗಳ ಸುಧಾರಣೆ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಮಧ್ಯೆ, ವಿದೇಶದಲ್ಲಿರುವ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ದೂರವಾಣಿ ಕರೆ ಮಾಡಿ ಟ್ರಿಪಲ್ ತಲಾಖ್  ಹೇಳುವ ಮೂಲಕ ವಿಚ್ಛೇದನ ನೀಡಿದ್ದಾನೆ. 
ವರದಿಗಳ ಪ್ರಕಾರ, ಶಹರಾಣಾಪುರ ಜಿಲ್ಲೆಯ ನಿವಾಸಿ ಶಹನವಾಜ್ ಕೆಲ ದಿನಗಳ ಹಿಂದೆ ಪತ್ನಿಗೆ ದೂರವಾಣಿ ಕರೆ ಮಾಡಿ ಮೂರು ಬಾರಿ ತಲಾಖ್ ಹೇಳುವುದರ ಮೂಲಕ ಪತ್ನಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾನೆ. 
 
ನನ್ನ ಪತಿ ದೂರವಾಣಿ ಕರೆ ಮಾಡಿ ಮಾನಸಿಕವಾಗಿ ಹಿಂಸೆ ನೀಡತೊಡಗಿದರು. ಆದರೆ ಎಲ್ಲವನ್ನು ಸಹಿಸಿಕೊಂಡ ನಾನು ಸಲಾಮ್ ಎಂದೆ, ಆದರೆ ತಕ್ಷಣ ಅವರು ಮೂರು ಬಾರಿ ತಲಾಖ್ ಎಂದರು ಎಂದು ನೊಂದ ಪತ್ನಿ ದೂರಿದ್ದಾಳೆ. 
 
ನಿನ್ನನ್ನು ಮುಕ್ತಳಾಗಿಸಿದ್ದೇನೆ (ತುಝೆ ಆಜಾದ್ ಕರ್ ದಿಯಾ), ಎಂದು ಪತಿ ಹೇಳಿದ್ದಾಗಿ ಆಕೆ ಹೇಳಿದ್ದಾಳೆ. 
 
ಮೂಲತಃ ಮುಝಪ್ಫರ್‌ನಗರದ ಪೀಡಿತೆ ಕಳೆದ ಎರಡು ವರ್ಷಗಳ ಹಿಂದೆ ಶಹನವಾಜ್‌ನನ್ನು ವರಿಸಿದ್ದಳು. ದಂಪತಿಗೆ ಒಂದು ಹೆಣ್ಣುಮಗುವಿದೆ. ಮಗು ಜನಿಸುವವರೆಗೆ ಎಲ್ಲವೂ ಚೆನ್ನಾಗಿತ್ತು, ಬಳಿಕ ಪತಿ ಮತ್ತು ಆತನ ಪೋಷಕರು ನನ್ನನ್ನು ನಿರ್ಲಕ್ಷಿಸಲು ಪ್ರಾರಂಭಿಸಿದರು ಎಂದಾಕೆ ಆರೋಪಿಸಿದ್ದಾಳೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments