Webdunia - Bharat's app for daily news and videos

Install App

ಪ್ರೀತಿಸಲು ನಿರಾಕರಿಸಿದ ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿ

Webdunia
ಶನಿವಾರ, 29 ಅಕ್ಟೋಬರ್ 2016 (13:52 IST)
ಆಘಾತಕಾರಿ ಘಟನೆಯೊಂದರಲ್ಲಿ  ವ್ಯಕ್ತಿಯೊಬ್ಬ ಬಸ್‌ನಲ್ಲಿದ್ದ ಬಾಲಕಿಯನ್ನು ಎಳೆದುಕೊಂಡು ಹೋಗಿ ಚಾಕುವಿನಿಂದ ಮನಬಂದಂತೆ ತಿವಿದು ಹತ್ಯೆ ಮಾಡಿದ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. 
 
ಆರೋಪಿಯಿಂದ ಬಾಲಕಿಯನ್ನು ಉಳಿಸಲು ಬಸ್ ಚಾಲಕ ಪ್ರಯತ್ನಿಸಿದನಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ, ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. 
 
ಕಾಲೇಜು ವಿದ್ಯಾರ್ಥಿನಿಯಾದ ಸಂಜು ಸಿಂಗ್ ದೀಪಾವಳಿ ಹಬ್ಬಕ್ಕಾಗಿ ಗ್ರಾಮಕ್ಕೆ ತೆರಳುತ್ತಿದ್ದಳು ಎನ್ನಲಾಗಿದೆ. ಆರೋಪಿ ಶಿವೇಂದ್ರ ಸಿಂಗ್, ಗೋತ್ರಾ ಗ್ರಾಮದ ಬಳಿ ಬಸ್ ನಿಲ್ಲಿಸಿ, ಬಸ್‌ನೊಳಗೆ ಪೆಟ್ರೋಲ್ ಸುರಿದು ಬಸ್‌ಗೆ ಬೆಂಕಿ ಹಚ್ಚುವ ಬೆದರಿಕೆಯೊಡ್ಡಿದಾಗ ಗಾಬರಿಗೊಂಡ ಪ್ರಯಾಣಿಕರು ಬಸ್‌‌ನಿಂದ ಇಳಿದಿದ್ದಾರೆ.
 
 ಬಾಲಕಿ ಸಂಜು ಸಿಂಗ್‌ಳನ್ನು ಬಸ್‌ನಿಂದ ಒತ್ತಾಯಪೂರ್ವಕವಾಗಿ ಕೆಳಗಿಳಿಸಿ ನಂತರ ಚಾಕುವನಿಂದ ಮನಬಂದಂತೆ ತಿವಿದಿದ್ದಾನೆ. ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈದೇ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ್ದ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.  
 
ಆರೋಪಿ ಶಿವೇಂದ್ರ ಸಿಂಗ್ ಬಾಲಕಿಯನ್ನು ಪ್ರೀತಿಸುತ್ತಿದ್ದನು ಎನ್ನಲಾಗಿದೆ. ಆದರೆ, ಬಾಲಕಿ ಆತನನ್ನು ಪ್ರೀತಿಸುತ್ತಿರಲಿಲ್ಲವಾದ್ದರಿಂದ ಹತ್ಯೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments