Webdunia - Bharat's app for daily news and videos

Install App

ಲೈವ್ ಸುಸೈಡ್: ಕೆಲಸ ಸಿಗಲಿಲ್ಲವೆಂದು ಮೂರನೇ ಮಹಡಿಯಿಂದ ಜಿಗಿದ

Webdunia
ಶುಕ್ರವಾರ, 1 ಜುಲೈ 2016 (11:36 IST)
ಸೂಕ್ತ  ಕೆಲಸ ಸಿಗಲಿಲ್ಲವೆಂದು ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. 
ಸೂಕ್ತ ಕೆಲಸ ಸಿಗಲಿಲ್ಲವೆಂದು ಬೇಸರಗೊಂಡಿದ್ದ ಯುವಕ ಕಾರ್ತಿಕ್‌ನಿಗೆ ಸದ್ಯ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸಹ ಸಂಬಳವನ್ನು ನೀಡಿರಲಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಮೂರು ಅಂತಸ್ತಿನ ಕಟ್ಟಡವನ್ನೇರಿದ ಆತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ 45 ನಿಮಿಷಗಳ ಕಾಲ ಬೆದರಿಕೆ ಹಾಕಿದ್ದಾನೆ. ಕಟ್ಟಡದ ಸುತ್ತ ನೆರೆದ ಜನರು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆದಿದ್ದಾರೆ. ಆತನನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದ್ದಾಗಲೇ ಆತ ಏಕಾಏಕಿ ಕಟ್ಟಡದಿಂದ ಜಿಗಿದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಆತ ದಾರಿ ಮಧ್ಯ ಸಾವನ್ನಪ್ಪಿದ್ದಾನೆ. 
 
ನೂರಾರು ಜನರ ಸಮ್ಮುಖದಲ್ಲೇ  ಈ ಘಟನೆ ನಡೆದಿದ್ದು ಅಲ್ಲೇ ನಿಂತಿದ್ದವರೊಬ್ಬರು ತಮ್ಮ ಕ್ಯಾಮರಾದಲ್ಲಿ ಆತ್ಮಹತ್ಯೆ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments