ಲೈವ್ ಸುಸೈಡ್: ಕೆಲಸ ಸಿಗಲಿಲ್ಲವೆಂದು ಮೂರನೇ ಮಹಡಿಯಿಂದ ಜಿಗಿದ

Webdunia
ಶುಕ್ರವಾರ, 1 ಜುಲೈ 2016 (11:36 IST)
ಸೂಕ್ತ  ಕೆಲಸ ಸಿಗಲಿಲ್ಲವೆಂದು ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಬಲಂಗಿರ್ ಜಿಲ್ಲೆಯಲ್ಲಿ ನಡೆದಿದೆ. 
ಸೂಕ್ತ ಕೆಲಸ ಸಿಗಲಿಲ್ಲವೆಂದು ಬೇಸರಗೊಂಡಿದ್ದ ಯುವಕ ಕಾರ್ತಿಕ್‌ನಿಗೆ ಸದ್ಯ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಸಹ ಸಂಬಳವನ್ನು ನೀಡಿರಲಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಮೂರು ಅಂತಸ್ತಿನ ಕಟ್ಟಡವನ್ನೇರಿದ ಆತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ 45 ನಿಮಿಷಗಳ ಕಾಲ ಬೆದರಿಕೆ ಹಾಕಿದ್ದಾನೆ. ಕಟ್ಟಡದ ಸುತ್ತ ನೆರೆದ ಜನರು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆದಿದ್ದಾರೆ. ಆತನನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದ್ದಾಗಲೇ ಆತ ಏಕಾಏಕಿ ಕಟ್ಟಡದಿಂದ ಜಿಗಿದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಆತ ದಾರಿ ಮಧ್ಯ ಸಾವನ್ನಪ್ಪಿದ್ದಾನೆ. 
 
ನೂರಾರು ಜನರ ಸಮ್ಮುಖದಲ್ಲೇ  ಈ ಘಟನೆ ನಡೆದಿದ್ದು ಅಲ್ಲೇ ನಿಂತಿದ್ದವರೊಬ್ಬರು ತಮ್ಮ ಕ್ಯಾಮರಾದಲ್ಲಿ ಆತ್ಮಹತ್ಯೆ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments