Webdunia - Bharat's app for daily news and videos

Install App

ಕೋತಿಗಳು ಮಾಡಿದ ಕೆಲಸಕ್ಕೆ ವ್ಯಕ್ತಿ ಬಲಿ

Webdunia
ಭಾನುವಾರ, 21 ಅಕ್ಟೋಬರ್ 2018 (08:58 IST)
ಉತ್ತರ ಪ್ರದೇಶ : ಕಟ್ಟಿಗೆ ಸಂಗ್ರಹಿಸುತ್ತಿದ್ದ ವ್ಯಕ್ತಿಯ ಮೇಲೆ ಕೋತಿಗಳು ಇಟ್ಟಿಗೆ ಕಲ್ಲು ಎಸೆದು ದಾಳಿ ಮಾಡಿದ  ಪರಿಣಾಮ ಆತ  ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಬಾಘಪತ್‍ ನ ಟಿಕ್ರಿ ಪ್ರದೇಶದಲ್ಲಿ ನಡೆದಿದೆ.


ಧರ್ಮಪಾಲ್ ಸಿಂಗ್(72) ಕೋತಿಗಳ ದಾಳಿಗೆ ಬಲಿಯಾದ ವ್ಯಕ್ತಿ. ಈತ ಒಣ ಕಟ್ಟಿಗೆಯ ತುಂಡುಗಳನ್ನು ಸಂಗ್ರಹಿಸುತ್ತಿರುವಾಗ ಕೋತಿಗಳು  ಆತನ  ಮೇಲೆ ಸುಮಾರು 20 ಇಟ್ಟಿಗೆಯ ತುಂಡುಗಳನ್ನು ಎಸೆದಿವೆ. ಅವುಗಳು ಎಸೆದ ರಭಸಕ್ಕೆ ಧರ್ಮಪಾಲ್ ಸಿಂಗ್ ನ ತಲೆ ಮತ್ತು ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು,  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


ಈ ಘಟನೆ ಕುರಿತು ಧರ್ಮಪಾಲ್ ಸಿಂಗ್ ಅವರ ಕುಟುಂಬಸ್ಥರು ಕೋತಿಗಳ ಮೇಲೆ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಇದು ಅಪಹಾಸ್ಯಕ್ಕೆ ದಾರಿ ಮಾಡಿ ಕೊಡುತ್ತದೆ ಎಂದು ಪೊಲೀಸರು ಅದನ್ನು ಆಕಸ್ಮಿಕ ಘಟನೆ ಎಂದು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.


ಈಗಾಗಲೇ ಕೋತಿಗಳ ಹಾವಳಿಯಿಂದ ಕಂಗೆಟ್ಟ ಕುಟುಂಬಸ್ಥರು ಪೊಲೀಸರ ವರ್ತನೆಯಿಂದ ಕೋಪಗೊಂಡು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments