Webdunia - Bharat's app for daily news and videos

Install App

ಸಹೋದರಿಯರನ್ನು ರಕ್ಷಿಸಲು ಹೋದ ಅಣ್ಣನಿಗೆ ಗುಂಡೇಟು ಹಾಕಿದ ರೌಡಿಗಳು

Webdunia
ಗುರುವಾರ, 4 ಮೇ 2017 (16:01 IST)
ಆಘಾತಕಾರಿ ಘಟನೆಯೊಂದರಲ್ಲಿ ಸಹೋದರಿಯರನ್ನು ರಕ್ಷಿಸಲು ಹೋದ ಸಹೋದರನ್ನು ರೌಡಿಗಳು ಗುಂಡು ಹಾರಿಸಿ ಹತ್ಯೆಗೈದ ಹೃದಯವಿದ್ರಾವಕ ಘಟನೆ ವರದಿಯಾಗಿದೆ.
 
ಸಹೋದರ ಚಂದ್ರಶೇಖರ್ ತನ್ನ ಇಬ್ಬರು ಸಹೋದರಿಯರೊಂದಿಗೆ ಬುಧವಾರದಂದು ರಾತ್ರಿ ಛಾಟಾ ಗ್ರಾಮದಿಂದ ಡೀಗ್ ಗ್ರಾಮಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಚಂದ್ರಶೇಖರ್ ತನ್ನ ಇಬ್ಬರು ಸಹೋದರಿಯರೊಂದಿಗೆ ತೆರಳುತ್ತಿದ್ದ ದಾರಿಯನ್ನು ಅಡ್ಡಗಟ್ಟಿದ ರೌಡಿಗಳು, ಚಿನ್ನಾಭರಣ, ಹಣ ದೋಚುವ ವಿಫಲ ಪ್ರಯತ್ನ ಮಾಡಿದರು. ಚಂದ್ರಶೇಖರ್ ಸಹೋದರಿಯನ್ನು ರಕ್ಷಿಸಲು ಮುಂದಾದಾಗ ರೌಡಿಗಳಿಂದ ಗುಂಡೇಟಿಗೆ ಬಲಿಯಾಗಿದ್ದಾನೆ ಎನ್ನಲಾಗಿದೆ.
 
ರೌಡಿಗಳ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments