Webdunia - Bharat's app for daily news and videos

Install App

ವರದಕ್ಷಿಣೆ ದಾಹ: ಸೆಲ್ಫಿ ನೆಪದಲ್ಲಿ ಪತ್ನಿಯನ್ನು ಗಂಗಾನದಿಗೆ ತಳ್ಳಿದ ಪತಿ

Webdunia
ಬುಧವಾರ, 1 ಜೂನ್ 2016 (12:57 IST)
ವರದಕ್ಷಿಣೆ ವಿವಾದದ ಹಿನ್ನೆಲೆಯಲ್ಲಿ ಪತ್ನಿಯನ್ನು ಸೆಲ್ಫಿ ತೆಗೆಯುವ ನೆಪದಲ್ಲಿ ಕರೆದುಕೊಂಡು ಹೋಗಿ ಗಂಗಾನದಿಯ ಕೆನಾಲ್‌ಗೆ ತಳ್ಳಿದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ
 
ಕಳೆದ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ ಅಯೇಶಾ ಮತ್ತು ಅಫ್ತಾಬ್ ದಂಪತಿಗಳಿಗೆ ಎಂಟು ತಿಂಗಳ ಮಗುವಿದೆ. 
 
ಆರೋಪಿ ಪತಿ ಪ್ರತಿನಿತ್ಯ ವರದಕ್ಷಿಣೆ ತರುವಂತೆ ಪುತ್ರಿಗೆ ಕಿರುಕುಳ ನೀಡುತ್ತಿದ್ದು, ವರದಕ್ಷಿಣೆ ತಾರದ ಹಿನ್ನೆಲೆಯಲ್ಲಿ ಆಕೆಯ ಹತ್ಯೆ ಮಾಡಿದ್ದಾನೆ ಎಂದು ಆಯೇಶಾ ಪೋಷಕರು ಆರೋಪಿಸಿದ್ದಾರೆ.
 
ಪತಿ ಅಫ್ತಾಬ್ ಹೆಚ್ಚು ಹೆಚ್ಚು ವರದಕ್ಷಿಣೆ ತರುವಂತೆ ಪತ್ನಿ ಆಯೇಶಾಗೆ ಕಿರುಕುಳ ನೀಡುತ್ತಿದ್ದ. ಆದರೆ, ಆಯೇಶಾ ಪೋಷಕರು ಬಡವರಾಗಿದ್ದರಿಂದ ಅಳಿಯನ ಬೇಡಿಕೆ ಈಡೇರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ, ಆಕೆಯನ್ನು ಪತಿ ಅಫ್ತಾಬ್ ಹತ್ಯೆ ಮಾಡಿದ್ದಾನೆ ಎಂದು ಆಯೋಶಾ ಸಹೋದರ ನಯೀಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 
 
ಹತ್ಯೆ ಪ್ರಕರಣವನ್ನು ಮಚ್ಚಿಹಾಕಲು ಪತಿ ಅಫ್ತಾಬ್, ಪತ್ನಿ ಆಯೇಶಾಳನ್ನು ಹತ್ಯೆ ಮಾಡಿದ ನಂತರ ತನ್ನ ಎಂಟು ತಿಂಗಳ ಮಗುವಿನೊಂದಿಗೆ ಪೊಲೀಸ್ ಠಾಣೆಗೆ ತೆರಳಿ, ಕೆಲವು ಗುಂಡಾಗಳು ನಮ್ಮನ್ನು ದರೋಡೆ ಮಾಡಲು ಯತ್ನಿಸಿದ್ದಲ್ಲದೇ ಪತ್ನಿಯನ್ನು ಗಂಗಾ ಕೆನಾಲ್‌ಗೆ ದೂಡಿದ್ದಾರೆ ಎಂದು ದೂರು ದಾಖಲಿಸಿದ್ದಾನೆ.
 
ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ ಅಫ್ತಾಬ್ ನಡುವಳಿಕೆ ಮತ್ತು ಹೇಳಿಕೆ ಸಂಶಯ ಮೂಡಿಸಿದ್ದರಿಂದ ಕರೆದು ಪೊಲೀಸ್ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ. ಆರೋಪಿಯ ವಿರುದ್ಧ ಹತ್ಯಾ ಪ್ರಕರಣ ಸೇರಿದಂತೆ ಕೆಲವು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments