Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಎಸಗಿ ಕೊಂದ ಕಿರಾತಕ

Webdunia
ಶನಿವಾರ, 11 ನವೆಂಬರ್ 2023 (10:19 IST)
ಮುಂಬೈನ ಬೈಂಗನ್‌ವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಕ್ಟೋಬರ್ 24ರಂದು ಬಾಲಕಿ ತನ್ನ ಮನೆಯ ಹತ್ತಿರದಲ್ಲಿರುವ ಟೈಲರ್ ಅಂಗಡಿಯಿಂದ ಬಟ್ಟೆ ತರಲು ಹೋಗಿದ್ದಳು. ಆದರೆ ಮನೆಗೆ ಹಿಂತಿರುಗಿರಲಿಲ್ಲ. ಆಕೆಯ ಕುಟುಂಬದವರು ಮಗಳು ನಾಪತ್ತೆಯಾದ ಪ್ರಕರಣವನ್ನು ದಾಖಲಿಸಿದ್ದರು. ಕಳೆದ ಅಕ್ಟೋಬರ್ 25 ರಂದು ಪೊಲೀಸರಿಗೆ 12 ವರ್ಷದ ಬಾಲಕಿಯ ಶವವೊಂದು ಸಿಕ್ಕಿತ್ತು.
 
ವೃತ್ತಿಯಲ್ಲಿ ಹೊಲಿಗೆ ಕೆಲಸ ಮಾಡುವ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಬಳಿಕ ಆಕೆಯನ್ನು ಅಮಾನುಷ ರೀತಿಯಲ್ಲಿ ಕೊಂದಿದ್ದಾನೆ. ಆಕೆಯ ದೇಹವನ್ನು ನಾಲ್ಕು ಭಾಗಗಳಾಗಿ ಕತ್ತರಿಸಿ ರಾತ್ರಿ ಪೂರ್ತಿ ತನ್ನ  ಅಂಗಡಿಯಲ್ಲಿ ಬಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಆರೋಪಿಯನ್ನು ಕಾಸೀಂ ಎಂದು ಗುರುತಿಸಲಾಗಿದೆ. ಬಾಲಕಿಯ ದೇಹವನ್ನು ತುಂಡರಿಸಿದ ಬಳಿಕ ತನ್ನ ಸ್ನೇಹಿತರೊಂದಿಗೆ ಆತ ತನ್ನ ಅಂಗಡಿಯಲ್ಲೇ ಮಲಗಿದ. ನಸುಕಿನ ಜಾವದಲ್ಲಿ ಎದ್ದ ಆತ ಬಾಲಕಿಯ ಶವವನ್ನು ಒಂದು ಪೆಟ್ಟಿಗೆಯಲ್ಲಿ ಹಾಕಿ ಅದನ್ನು ಕಸದ ತೊಟ್ಟಿಗೆಸೆದ.
 
ತನಿಖೆ ನಡೆಸಿದ ಪೊಲೀಸರಿಗೆ ಶವದ ಜತೆ ಬಟ್ಟೆಯ ತುಂಡುಗಳು ಸಿಕ್ಕಿದ್ದವು. ಅದರಲ್ಲಿ  ಹಕೀಂ ಸಾಹೇಬ ಎಂದು ಬರೆದಿತ್ತು. ಈ ಸಾಕ್ಷ್ಯವನ್ನಿಟ್ಟುಕೊಂಡು ಊರಿನಲ್ಲಿದ್ದ ಎಲ್ಲ ಬಟ್ಟೆ ಹೊಲೆಯುವ ದರ್ಜಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಕಾಸೀಂ ಸಿಕ್ಕಿ ಹಾಕಿಕೊಂಡ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮೇಲೆ ಈ ಮೊದಲು ಸಹ  ಅತ್ಯಾಚಾರ ನಡೆಸಿದ್ದಾಗಿ ವಿಚಾರಣೆ ವೇಳೆ ಆರೋಪಿ ಹೇಳಿಕೆ ನೀಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಮುಂದಿನ ಸುದ್ದಿ
Show comments