ಪತ್ನಿಯ ಕಾಟ ತಾಳಲಾರದೆ ಹತ್ಯೆಯಾಗಿರುವುದಾಗಿ ನಾಟಕವಾಡಿದ ಪತಿರಾಯ!

Webdunia
ಶನಿವಾರ, 2 ಜನವರಿ 2021 (10:33 IST)
ನವದೆಹಲಿ: ಪತ್ನಿಯ ಕಾಟ ತಾಳಲಾರದೇ ವ್ಯಕ್ತಿಯೊಬ್ಬ ತಾನು ಹತ್ಯೆಯಾಗಿರುವುದಾಗಿ ನಾಟಕವಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಬಿಹಾರದಲ್ಲಿ ನಡೆದಿದೆ.


ಬಿಹಾರದ ಪ್ರದೀಪ್ ಕುಮಾರ್ ರಾಮ್ ಎಂಬಾತ ಈ ಕೃತ್ಯ ನಡೆಸಿದವರು. ಈತನ ಪತ್ನಿ ಪ್ರತಿಭಾ ಶಾಲಾ ಶಿಕ್ಷಕಿ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಕಿತ್ತಾಟ ನಡೆಯುತ್ತಿತ್ತು ಎನ್ನಲಾಗಿದೆ. ಇತ್ತೀಚೆಗೆ ಪ್ರದೀಪ್ ತಮ್ಮ ನಿರ್ಮಾಣ ಹಂತದಲ್ಲಿರುವ ಮನೆಗೆ ತೆರಳಿ ರಾತ್ರಿ ಕಳೆದಿದ್ದರು. ಬೆಳಗಿನ ಹೊತ್ತಿಗೆ ಪತ್ನಿ ಅಲ್ಲಿಗೆ ಬಂದು ನೋಡಿದಾಗ ಅಲ್ಲೆಲ್ಲಾ ರಕ್ತದ ಕಲೆಯಿತ್ತು. ಆದರೆ ಪ್ರದೀಪ್ ಮೃತದೇಹ ಸಿಕ್ಕಿರಲಿಲ್ಲ. ಹೀಗಾಗಿ ಪ್ರತಿಭಾ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರ ಘಟನಾ ಸ್ಥಳದಲ್ಲಿ ಪರಿಶೀಲಿಸಿದಾಗ ಅವರ ಮನೆಯ ಸಮೀಪದಲ್ಲೇ ಖಾಲಿ ರಕ್ತದ ಬಾಟಲ್ ಒಂದು ಸಿಕ್ಕಿತ್ತು. ಇದರಿಂದ ಪೊಲೀಸರ ಅನುಮಾನ ಹೆಚ್ಚಿತ್ತು. ಇದೇ ವೇಳೆ ನೆರೆಯ ಉತ್ತರಪ್ರದೇಶದಲ್ಲಿ ಪ್ರದೀಪ್ ಪತ್ತೆಯಾಗಿದ್ದರು. ಹೀಗಾಗಿ ಪ್ರದೀಪ್ ಸಾವಿನ ನಾಟಕ ಬಯಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments