Publish Date: Sat, 29 Oct 2022 (12:58 IST)
Updated Date: Sat, 29 Oct 2022 (12:01 IST)
ಮುಂಬೈ : ಕುಂಟ ಎಂದು ರೇಗಿಸಿದ್ದಕ್ಕೆ 32 ವರ್ಷದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ರಿಕ್ಷಾ ಚಾಲಕ ಹತ್ಯೆಗೈದಿರುವ ಘಟನೆ ಮುಂಬೈನ ಗೋರೆಗಾಂವ್ನಲ್ಲಿ ನಡೆದಿದೆ.
ಗೋರೆಗಾಂವ್ (ಪೂರ್ವ)ದ ಮುಲುಂಡ್ ಲಿಂಕ್ ರಸ್ತೆಯ ಹನುಮಾನ್ ಟೆಕ್ಡಿಯಲ್ಲಿರುವ ಚೈನೀಸ್ ಫುಡ್ ಹೋಟೆಲ್ ಎದುರಿಗೆ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಮುಖೇಶ್ ಝಂಜರೆ (32) ಎಂದು ಗುರುತಿಸಲಾಗಿದೆ.
ಮುಖೇಶ್ ಝಂಜರೆ ಕುಳಿದ್ದ ವೇಳೆ ಆಹಾರ ತೆಗೆದುಕೊಂಡು ಹೋಗಲು 45 ವರ್ಷದ ಆರೋಪಿ ರಿಕ್ಷಾ ಚಾಲಕ ತೇಜ್ ಬಹದ್ದೂರ್ ಮೋರಿಯಾ ಹೋಟೆಲ್ಗೆ ಬಂದಿದ್ದನು.
ಅಪಘಾತದಿಂದಾಗಿ ಬಲಗಾಲು ಅಂಗವೈಕಲ್ಯ ಹೊಂದಿದ್ದ ತೇಜ್ ಬಹದ್ದೂರ್ ಕುಂಟುತ್ತಾ ನಡೆಯುತ್ತಿದ್ದರು. ಇದನ್ನು ಕಂಡು ಮುಖೇಶ್ ಝಂಜರೆ ಚುಡಾಯಿಸಿ, ನಿಂದಿಸಲು ಆರಂಭಿಸಿದ್ದಾನೆ.