Webdunia - Bharat's app for daily news and videos

Install App

2 ರೂಪಾಯಿಗಳಿಗಾಗಿ ಮಾಲೀಕನಿಗೆ ಚಾಕುವಿನಿಂದ ಇರಿದ ಗ್ರಾಹಕ

Webdunia
ಮಂಗಳವಾರ, 25 ಜುಲೈ 2017 (13:30 IST)
ಅಂಗಡಿ ಮಾಲೀಕನೊಂದಿಗೆ ನಡೆದ ಎರಡು ರೂಪಾಯಿಗಳ ಜಗಳದಲ್ಲಿ ಅಪರಿಚಿತ ಗ್ರಾಹಕನೊಬ್ಬ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
 
ಗಾಯಗೊಂಡ ಮಾಲೀಕ ರೋಹಿತ್‌ ಕುಮಾರ್‌ನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
 
ಅಪರಿಚಿತ ಗ್ರಾಹಕನೊಬ್ಬ ಸೀಗರೇಟು ಕೊಡುವಂತೆ 10 ರೂಪಾಯಿಗಳನ್ನು ಅಂಗಡಿ ಮಾಲೀಕನಿಗೆ ನೀಡಿದ್ದಾನೆ. ಆದರೆ, ಸಿಗರೇಟು ಮೌಲ್ಯ 12 ರೂಪಾಯಿಗಳಾಗಿದ್ದರಿಂದ ಇನ್ನೆರೆಡು ರೂಪಾಯಿ ಕೊಡುವಂತೆ ಮಾಲೀಕ ಕೇಳಿದ್ದಾನೆ. ಆದರೆ, ಗ್ರಾಹಕ ಕೊಡಲು ನಿರಾಕರಿಸಿದ್ದಾನೆ. ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತೆರಳಿದಾಗ ಗ್ರಾಹಕ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಅಪರಿಚಿತ ಗ್ರಾಹಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments