Webdunia - Bharat's app for daily news and videos

Install App

ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮೇಲೆ ಇಂಕ್ ದಾಳಿ

Webdunia
ಸೋಮವಾರ, 19 ಸೆಪ್ಟಂಬರ್ 2016 (17:41 IST)
ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಲೆಪ್ಟಿನೆಂಟ್ ಗವರ್ನರ್ ಕಚೇರಿಗೆ ಭೇಟಿ ನೀಡಲು ಬಂದಿದ್ದಾಗ ವ್ಯಕ್ತಿಯೊಬ್ಬ ಅವರ ಮೇಲೆ ಇಂಕ್ ಎಸೆದ ಘಟನೆ ವರದಿಯಾಗಿದೆ.
 
ದೆಹಲಿಯಲ್ಲಿ ಚಿಕನ್‌ಗುನ್ಯಾ ಮತ್ತು ಡೆಂಘಿ ಜ್ವರಗಳಿಂದ ರೋಗಿಗಳು ತತ್ತರಿಸಿರುವಾಗ ಸಿಸೋಡಿಯಾ ಫಿನ್‌ಲ್ಯಾಂಡ್‌‌ಗೆ ತೆರಳಿರುವುದರ ವಿರುದ್ಧ ವ್ಯಕ್ತಿ ಅಸಮಾಧಾನಗೊಂಡಿದ್ದ ಎಂದು ಹೇಳಲಾಗುತ್ತಿದೆ.   
 
ಮಾಧ್ಯಮಗಳೊಂದಿಗೆ ಮಾತನಾಡಿ ಸಿಸೋಡಿಯಾ ಕಾರಿನಲ್ಲಿ ಕುಳಿತು ಹೊರಡುತ್ತಿರುವ ಸಂದರ್ಭದಲ್ಲಿ ಬ್ರಿಜೇಶ್ ಶುಕ್ಲಾ ಎನ್ನುವ ವ್ಯಕ್ತಿ ಸಿಸೋಡಿಯಾ ಮುಖದ ಮೇಲೆ ಇಂಕ್ ಸಿಡಿಸಿದ್ದಾನೆ. 
 
ಮುಖದ ಮೇಲೆ ಬಿದ್ದ ಇಂಕ್ ಒರೆಸಿಕೊಂಡ ಸಿಸೋಡಿಯಾ, ಇದು ಕಾಂಗ್ರೆಸ್ ಮತ್ತು ಬಿಜೆಪಿಯ ಕೊಳಕು ರಾಜಕೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದೆಹಲಿಯಲ್ಲಿ ಚಿಕನ್‌ಗುನ್ಯಾ ಮತ್ತು ಡೆಂಘಿ ಜ್ವರಗಳಿಂದ ರೋಗಿಗಳು ತತ್ತರಿಸಿರುವಾಗ ಸಿಸೋಡಿಯಾ ಫಿನ್‌ಲ್ಯಾಂಡ್‌‌ಗೆ ತೆರಳಿರುವುದರ ವಿರುದ್ಧ ವ್ಯಕ್ತಿ ಅಸಮಾಧಾನಗೊಂಡಿದ್ದ ಎಂದು ಮೂಲಗಳು ತಿಳಿಸಿವೆ.  
 
ದೆಹಲಿ ಸರಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹೊಸ ಆಯಾಮ ತರಲು ಬದ್ಧವಾಗಿದೆ. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ಇಂಕ್ ಮೂಲಕ ಕಾರ್ಯನಿರ್ವಹಿಸುತ್ತಿವೆ. ಎರಡೂ ಪಕ್ಷಗಳು ದೆಹಲಿ ನಾಗರಿಕರಿಗೆ ಒಳ್ಳೆಯದು ಬಯಸುತ್ತಿಲ್ಲ. ಉಭಯ ಪಕ್ಷಗಳ ಮುಖ್ಯ ಉದ್ದೇಶ ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸುವಂತಹ ಕೊಳಕು ರಾಜಕಾರಣ ಮಾಡುತ್ತಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments