Webdunia - Bharat's app for daily news and videos

Install App

ಪನ್ನೀರ್‌ಗಾಗಿ ಪ್ರಾಣ ಬಿಟ್ಟ ಅಭಿಮಾನಿ

Webdunia
ಸೋಮವಾರ, 20 ಫೆಬ್ರವರಿ 2017 (07:04 IST)
ಚೆನ್ನೈನಲ್ಲಿ ಸಿನಿಮಾ ನಟರು ಮತ್ತು ರಾಜಕಾರಣಿಗಳೆಂದರೆ ಹುಚ್ಚು ಅಭಿಮಾನ. ಅವರಿಗಾಗಿ ಪ್ರಾಣ ಕೊಡಲು ಹಿಂದೇಟು ಹಾಕುವುದಿಲ್ಲ. ಮಾಜಿ ಸಿಎಂ ಜಯಲಲಿತಾ ಸಾವನ್ನಪ್ಪಿದಾಗ 500ಕ್ಕಿಂತ ಹೆಚ್ಚು ಜನರು ಆತ್ಮಹತ್ಯೆ, ಹೃದಯಾಘಾತದಿಂದ ದುರ್ಮರಣವನ್ನಿಪ್ಪಿದ್ದರು ಎನ್ನಲಾಗುತ್ತಿದೆ. ಮತ್ತೀಗ ಪನ್ನೀರ್ ಸೆಲ್ವಂ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಕ್ಕೆ ನೊಂದು ಅವರ ಅಭಿಮಾನಿಯೋರ್ವ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಾಂಚಿಪುರಮ್ ನಿವಾಸಿಯಾದ 37 ವರ್ಷದ ಮೂಸಾ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿಕೊಂಡು ಗಂಭೀರ ಸ್ಥಿತಿಯಲ್ಲಿ ಕಿಲ್‌ಪೌಕ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಆತ ಚಿಕಿತ್ಸೆಫಲಕಾರಿಯಾಗದೇ ಭಾನುವಾರ ಕೊನೆಯುಸಿರೆಳೆದಿದ್ದಾನೆ. ಮೃತ ಮೂಸಾ ಪತ್ನಿ ನಿಶಾ (35) ಮಕ್ಕಳಾದ ಬಾನು (15) ಮತ್ತು ಸೈಯ್ಯದ್(10) ಅವರನ್ನು ಅಗಲಿದ್ದಾನೆ. 
 
ಗುರುವಾರ ಮೂಸಾ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿದ್ದ ಪನ್ನೀರ್ ಸೆಲ್ವಂ ಅವರ ಕುಟುಂಬಕ್ಕೆ 1 ಲಕ್ಷ ರೂಪಾಯಿ ಸಹಾಯಧನವನ್ನು ನೀಡಿದ್ದರು. ಜತೆಗೆ ಶೀಘ್ರವಾಗಿ ಗುಣಮುಖರಾಗಿರೆಂದು ಹಾರೈಸಿದ್ದರು.
 
ಮೃತ ಮೂಸಾ ವೃತ್ತಿಯಲ್ಲಿ ಪೇಂಟರ್ ಆಗಿದ್ದು, ಎಐಡಿಎಂಕೆ ಸದಸ್ಯನೂ ಆಗಿದ್ದ.
 
ಬುಧವಾರ ಸಂಜೆ ವಾನಿಗರ್ ವಿಧಿಲ್ಲಿ ಪನ್ನೀರ್ ಪರವಾಗಿ ಘೋಷಣೆ ಕೂಗಿದ ಆತ ಏಕಾಏಕಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ತಕ್ಷಣ ಆತನಿಗೆ ತಗುಲಿದ್ದ ಬೆಂಕಿಯನ್ನು ನಂದಿಸಿದ ಸ್ಥಳೀಯರು ಅಂಬುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments