ರಾಹುಲ್ ಜೀ ನಿಮ್ಮ ಹಾಗೆ ದೇಶದ ಸಮಸ್ಯೆ ಅರಿತವರಿಲ್ಲ: ಮನಮೋಹನ್ ಸಿಂಗ್ ಶಹಬ್ಬಾಶ್ ಗಿರಿ

Webdunia
ಶನಿವಾರ, 16 ಡಿಸೆಂಬರ್ 2017 (11:29 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರಿಂದ ರಾಹುಲ್ ಗಾಂಧಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನವದೆಹಲಿಯಲ್ಲಿ ನಡೆಯುತ್ತಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋನಿಯಾ, ರಾಹುಲ್ ಗುಣಗಾನ ಮಾಡಿದ್ದಾರೆ.
 

ರಾಹುಲ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್, 19 ವರ್ಷಗಳ ಕಾಲ ಸೋನಿಯಾ ಗಾಂಧಿ ಕಾಂಗ್ರೆಸ್ ನ್ನು ಸಮರ್ಥವಾಗಿ ಮುನ್ನಡೆಸಿದರು. ನಾನು ಪ್ರಧಾನ ಮಂತ್ರಿಯಾಗಿ 10 ವರ್ಷ ಆಡಳಿತ ಮಾಡಿದ ಸಂದರ್ಭದಲ್ಲಿ ಕಾಲ ಕಾಲಕ್ಕೆ ತಕ್ಕಂತೆ ಸಲಹೆ ಸೂಚನೆ ನೀಡುತ್ತಾ ನಮಗೆ ಸ್ಪೂರ್ತಿಯಾಗಿದ್ದರು ಎಂದು ಹೊಗಳಿಕೆ ನೀಡಿದರು.

ಇನ್ನೊಂದೆಡೆ ರಾಹುಲ್ ಗಾಂಧಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರಲ್ಲದೆ, ರಾಹುಲ್ ದೇಶಾದ್ಯಂತ ಸುತ್ತಾಡಿದ್ದಾರೆ. ಅವರಿಗೆ ದೇಶದ ಸಮಸ್ಯೆ ಬಗ್ಗೆ ಚೆನ್ನಾಗಿ ಅರಿವಿದೆ. ಅವರಷ್ಟು ತಿಳಿದವರಿಲ್ಲ ಎಂದು ಗುಣಗಾನ ಮಾಡಿದರು.

ರಾಹುಲ್ ಪದಗ್ರಹಣ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೇರಿದಂತೆ ಕಾಂಗ್ರೆಸ್ ನ ಬಹುತೇಕ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments