Webdunia - Bharat's app for daily news and videos

Install App

ಅಫ್ಜಲ್ ಗುರು ಬಗ್ಗೆ ಅಯ್ಯೋ ಪಾಪ ಎಂದ ಮಣಿ ಶಂಕರ್

Webdunia
ಮಂಗಳವಾರ, 3 ಮಾರ್ಚ್ 2015 (15:20 IST)
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರು ಉಗ್ರ ಅಫ್ಜಲ್ ಗುರು ಅವರನ್ನು ಇಂದು ಸ್ಮರಿಸಿಕೊಂಡಿದ್ದು, ಗುರು ಸಂಸತ್ ದಾಳಿ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ ಎಂದು ಸಾಬೀತಾಗಿರಲಿಲ್ಲ. ಆದರೆ ಗುರು ಅವರನ್ನು ಗಲ್ಲಿಗೇರಿಸಲಾಗಿದೆ. ಇದರಿಂದ ನಾನು ಬೇಸರಗೊಂಡಿದ್ದೆ ಎನ್ನುವ ಮೂಲಕ ಉಗ್ರನ ಪರ ವಕಾಲತ್ತು ವಹಿಸಿ ಮಾತನಾಡಿದ್ದು, ಚರ್ಚೆಗೆ ಗ್ರಾಸವಾಗಿದ್ದಾರೆ.  
 
ಮಾಧ್ಯಮಗಳಿಗೆ ಮಾತನಾಡಿದ ಅವರು, ಸಂಸತ್ ಭವನದ ಮೇಲೆ ಐದು ಮಂದಿ ಉಗ್ರರು ನಡೆಸಿದ್ದ ದಾಳಿಯ ಮೇಲಿನ ಆರೋಪದಲ್ಲಿ ಅಫ್ಜಲ್ ಅವರನ್ನು ಬಂಧಿಸಲಾಗಿತ್ತು. ಅಲ್ಲದೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆಯಲ್ಲಿಯೇ ಆತನನ್ನು ಗಲ್ಲಿಗೇರಿಸಲಾಗಿದೆ. ಪ್ರಕರಣದಲ್ಲಿ ಗುರು ಆರೋಪಿ ಎಂದು ಸಾಬೀತಾಗಿರಲಿಲ್ಲ. ಆದರೆ ಅವರನ್ನು ಗಲ್ಲಿಗೇರಿಸಲಾಗಿದೆ. ಅವರ ಕುಟುಂಬಕ್ಕೆ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಅವರನ್ನು ಆಗಾಗ ಸ್ಮರಿಸಿಕೊಳ್ಳುತ್ತಲೇ ಇರುತ್ತೇನೆ. ಅಲ್ಲದೆ ಇದರಿಂದ ನನಗೆ ಬೇಸರವಾಗಿತ್ತು ಎಂದು ಉಗ್ರ ಅಫ್ಜಲ್ ಗುರು ಅವರ ಪರವಾಗಿ ಮಣಿಶಂಕರ್ ಅಯ್ಯರ್ ಮಾತನಾಡಿದ್ದು, ಪ್ರಸ್ತುತ ಚರ್ಚೆಗೆ ಗ್ರಾಸವಾಗಿದ್ದಾರೆ. 
 
2001 ಡಿಸೆಂಬರ್ 13ರಂದು ಅಧಿವೇಶನ ನಡೆಯುತ್ತಿದ್ದ ವೇಳೆ ಜೈಷೆ ಮೊಹಮದ್ ಉಗ್ರ ಸಂಘಟನೆಗೆ ಸೇರಿದ್ದ ಐದು ಮಂದಿ ಉಗ್ರರು ಸಂಸತ್ತಿನ ಮೇಲೆ ದಾಳಿ ನಡೆಸಿದ್ದರು. ಪರಿಣಾಮ 12 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯ ರೂವಾರಿಯಾಗಿದ್ದ ಎಂಬ ಆರೋಪ ಹಿನ್ನೆಲೆಯಲ್ಲಿ ಉಗ್ರ ಅಫ್ಜಲ್ ಗುರು ಬಂಧಿಸಲಾಗಿತ್ತು.  
 
ಅಫ್ಜಲ್ ಗುರು ತನಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ. ಆದರೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು 2013ರ ಜ.26ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಗುರು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಬಳಿಕ 2013ರ ಫೆ.11ರ ಬೆಳಗ್ಗೆ 8 ಗಂಟೆ ಸಮಯದಲ್ಲಿ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿತ್ತು. 2004ರಲ್ಲಿ ಸುದೀರ್ಘ ವಿಚಾರಣೆಯ ನಂತರ ಸುಪ್ರೀಂಕೋರ್ಟ್ ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments