Webdunia - Bharat's app for daily news and videos

Install App

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

Krishnaveni K
ಶುಕ್ರವಾರ, 25 ಜುಲೈ 2025 (09:34 IST)
ನವದೆಹಲಿ: ಹಿಂಸಾಚಾರ ಪೀಡಿತವಾದ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಮುಂದುವರಿಸುವ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಘೋಷಿಸಿದೆ.

ಈ ಬಗ್ಗೆ ರಾಜ್ಯಸಭೆಯಲ್ಲಿ ಗೃಹಸಚಿವ ಅಮಿತ್ ಶಾ ಪ್ರಸ್ತಾವನೆ ಮಂಡಿಸಿದ್ದು ಸದನ ಅಂಗೀಕರಿಸಿದೆ. ಮಣಿಪುರದಲ್ಲಿ ಇನ್ನೂ 6 ತಿಂಗಳು ರಾಷ್ಟ್ರಪತಿ ಆಳ್ವಿಕೆ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಸಂವಿಧಾನದ 356 ನೇ ವಿಧಿ ಅನ್ವಯ 2025 ರ ಫೆಬ್ರವರಿ 13 ರಂದು ರಾಷ್ಟ್ರಪತಿಗಳು ಮಾಡಿದ ಸುಗ್ರೀವಾಜ್ಞೆಯನ್ನು 2025 ಆಗಸ್ಟ್ 13 ರಿಂದ ಆರು ತಿಂಗಳ ಕಾಲ ಮುಂದುವರಿಸುವುದಾಗಿ ಗೃಹಸಚಿವರು ಮಂಡಿಸಿದ ಪ್ರಸ್ತಾವನೆಯನ್ನು ಸಂಸತ್ ಅಂಗೀಕರಿಸಿದೆ.

2023 ರಿಂದ ಮಣಿಪುರದಲ್ಲಿ ನಿರಂತರ ಹಿಂಸಾಚಾರ ನಡೆಯುತ್ತಲೇ ಇದೆ. ಆರಂಭದಲ್ಲಿ ಎರಡು ಬುಡಕಟ್ಟು ಸಮುದಾಯದ ನಡುವೆ ಆರಂಭವಾದ ಹಿಂಸಾಚಾರ ಭುಗಿಲೆದ್ದ ಪರಿಣಾಮ ಮುಖ್ಯಮಂತ್ರಿ ಬೀರೇನ್ ಸಿಂಗ್ ರಾಜೀನಾಮೆ ನೀಡಬೇಕಾಯಿತು. ಬಳಿಕ ಪರಿಸ್ಥಿತಿ ಕೈಮೀರಿ ಹೋದ ಹಿನ್ನಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದವರೆಗೂ ಇರಲಿದೆ ಮಳೆಯ ಅಬ್ಬರ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments