Select Your Language

Notifications

webdunia
webdunia
webdunia
webdunia

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮನೀಶ್ ಸಿಸೋಡಿಯಾ

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮನೀಶ್ ಸಿಸೋಡಿಯಾ
ನವದೆಹಲಿ , ಮಂಗಳವಾರ, 28 ಫೆಬ್ರವರಿ 2023 (13:35 IST)
ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರದ ಡಿಸಿಎಂ ಮನೀಶ್ ಸಿಸೋಡಿಯಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
 
ಸಿಸೋಡಿಯಾ ಅರ್ಜಿಯನ್ನು ದಿನದ ಕೊನೆಯಲ್ಲಿ ವಿಚಾರಣೆ ನಡೆಸುವುದಾಗಿ ಸಿಜೆಐ ಪೀಠ ಹೇಳಿದೆ. ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹಿರಿಯ ವಕೀಲ ಅಭಿಷೇಕ ಮನುಸಿಂಘ್ವಿ ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಪ್ರಸ್ತಾಪಿಸಿದರು.

ಪ್ರಕರಣದ ತುರ್ತು ವಿಚಾರಣೆ ನಡೆಸಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿ ಪೀಠ ಈಗಾಗಲೇ ವಿಚಾರಣೆ ಅರ್ಜಿಗಳು ಪಟ್ಟಿಯಾಗಿರುವ ಹಿನ್ನೆಲೆ ಕಲಾಪದ ಅಂತ್ಯದಲ್ಲಿ ವಿಚಾರಣೆ ನಡೆಸುವ ಭರವಸೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಮಂತರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಕುಸಿದ ಅದಾನಿ!