Webdunia - Bharat's app for daily news and videos

Install App

ಭಾರತದ ನಡೆಗೆ ಮನೀಶ್ ತಿವಾರಿ ಆಕ್ಷೇಪ

Webdunia
ಭಾನುವಾರ, 27 ಫೆಬ್ರವರಿ 2022 (08:51 IST)
ನವದೆಹಲಿ : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸದೇ ಭಾರತ ತಟಸ್ಥ ನೀತಿಯನ್ನು ಅನುಸರಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
 
ನಮ್ಮ ಕಷ್ಟಗಳಲ್ಲಿ ರಷ್ಯಾ ನಮ್ಮ ಬೆಂಬಲಕ್ಕೆ ನಿಂತಿದೆ. ಆದರೆ ಸ್ನೇಹಿತ ತಪ್ಪು ಮಾಡಿದರೆ, ನಾವು ಆತನನ್ನು ಸರಿಪಡಿಸಬೇಕು. ಒಂದು ಕಡೆ ಪ್ರಜಾಪ್ರಭುತ್ವವನ್ನು ಪ್ರತಿಪಾದಿಸುವ ರಾಷ್ಟ್ರಗಳು ಮತ್ತು ಇತರರು ನಿರಂಕುಶ ಮಾರ್ಗವನ್ನು ಬೆಂಬಲಿಸುವ ಸಂದರ್ಭದಲ್ಲಿ ಭಾರತ ತನ್ನ ಪಕ್ಷವನ್ನು ಆರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಭಾರತದ ಅಲಿಪ್ತ ಆಂದೋಲನ ನೀತಿ 1991 ರಿಂದ ಕ್ರಮೇಣ ಕೊನೆಗೊಂಡಿದೆ. ಈಗಲೂ ಭಾರತವು ಅದೇ ನೀತಿಗೆ ಮರಳಲು ಯೋಚಿಸಿದರೆ ಅದು ತಪ್ಪಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಉಕ್ರೇನ್ ಮೇಲೆ ರಷ್ಯಾ ದಾಳಿಯನ್ನು ಖಂಡಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತೀಯ ಕಾಲಮಾನ ಶನಿವಾರ ನಸುಕಿನ ಜಾವ ಸಭೆ ಆಯೋಜಿಸಲಾಗಿತ್ತು. ಅಮೆರಿಕ ಮತ್ತು ಆಲ್ಬೇನಿಯಾ ಸಂಯುಕ್ತವಾಗಿ ಮಂಡಿಸಿದ ನಿರ್ಣಯದ ಮೇಲೆ ಮತದಾನ ನಡೆದಿತ್ತು.

ಭಾರತ, ಚೀನಾ, ಯುಎಇ ದೇಶಗಳು ಮತದಾನದಿಂದ ದೂರ ಉಳಿದಿದ್ದರೆ ಪೋಲೆಂಡ್, ಇಟಲಿ, ನ್ಯೂಜಿಲೆಂಡ್ ಸೇರಿ 11 ದೇಶಗಳು ನಿರ್ಣಯದ ಪರವಾಗಿ ಮತ ಹಾಕಿವೆ. ರಷ್ಯಾ ದೇಶ ಊಹಿಸಿದಂತೆಯೇ ವಿಟೋ ಅಧಿಕಾರ ಚಲಾಯಿಸಿ, ನಿರ್ಣಯ ಪಾಸ್ ಆಗದಂತೆ ತಡೆದಿದೆ. ಈ ಬಗ್ಗೆ ಅಮೆರಿಕ ಆಕ್ರೋಶ ಹೊರಹಾಕಿದೆ. ಈ ವಿಚಾರವನ್ನು ಸಾಮಾನ್ಯ ಸಭೆಗೆ ಕೊಂಡೊಯ್ಯುವುದಾಗಿ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments