Select Your Language

Notifications

webdunia
webdunia
webdunia
webdunia

ದಲಿತ ವಿರೋಧಿ ಧೋರಣೆ ತಳೆದಿರುವ ಬಿಜೆಪಿಗೆ ತಕ್ಕ ಪಾಠ: ಮಾಂಜಿ

ದಲಿತ ವಿರೋಧಿ ಧೋರಣೆ ತಳೆದಿರುವ ಬಿಜೆಪಿಗೆ ತಕ್ಕ ಪಾಠ: ಮಾಂಜಿ
ಪಾಟ್ನಾ , ಗುರುವಾರ, 21 ಜುಲೈ 2016 (15:49 IST)
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಅಸಭ್ಯ ಭಾಷೆ ಬಳಸಿದ ಬಿಜೆಪಿ ವಿರುದ್ಧ ಬಿಹಾರ್ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ವಾಗ್ದಾಳಿ ನಡೆಸಿದ್ದಾರೆ.
 
ಗಯಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ಅಸಭ್ಯ ಹೇಳಿಕೆ ನೀಡಿ ದೇಶಾದ್ಯಂತ ದಲಿತರಿಗೆ ಅಪಮಾನ ಮಾಡಿದ್ದಾರೆ. ಬಿಜೆಪಿ ತನ್ನ ಧೋರಣೆಯಲ್ಲಿ ಬದಲಾವಣೆ ತರದಿದ್ದಲ್ಲಿ ದಲಿತರು ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.
 
ಬಿಜೆಪಿ  ಮುಖಂಡ ದಯಾಶಂಕರ್ ಹೇಳಿಕೆ ಕೇವಲ ಖಂಡನೀಯವಲ್ಲ. ಅಪರಾಧ ಕೂಡಾ ಆಗಿರುವುದರಿಂದ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಒತ್ತಾಯಿಸಿದ್ದಾರೆ.
 
ದಯಾಶಂಕರ್‌ ಸಿಂಗ್‌ರನ್ನು ಕೇವಲ ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದರೆ ಸಾಲದು. ಅವರ ವಿರುದ್ಧ ಎಸ್‌ಸಿ-ಎಸ್‌ಟಿ ಕಾಯ್ದೆ ಅನ್ವಯ ಎಫ್‌ಐಆರ್ ದಾಖಲಿಸಿ ಜೈಲಿಗೆ ಕಳುಹಿಸಬೇಕು ಎಂದು ಗುಡುಗಿದ್ದಾರೆ.
 
ಬಿಜೆಪಿ ಮುಖಂಡನಿಗೆ ಜೈಲಿಗೆ ಕಳುಹಿಸಿದಲ್ಲಿ ದಲಿತರಿಗೆ ಸ್ವಲ್ಪ ಮಟ್ಟಿಗಾದರೂ ನೆಮ್ಮದಿ ದೊರೆಯುತ್ತದೆ. ಪ್ರಧಾನಿ ಮೋದಿ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುತ್ತಾರೆ ಎನ್ನುವ ವಿಶ್ವಾಸವಿರುವುದಾಗಿ ಬಿಹಾರ್ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್: ದಲಿತ ಕುಟುಂಬಗಳಿಗೆ ಸಾಂತ್ವನ ಹೇಳಿದ ರಾಹುಲ್ ಗಾಂಧಿ