Webdunia - Bharat's app for daily news and videos

Install App

ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್

Krishnaveni K
ಗುರುವಾರ, 30 ಮೇ 2024 (13:49 IST)
Photo Credit: X
ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ.

ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ ಹಕ್ಕು ಅಲ್ಪಸಂಖ್ಯಾತರದ್ದು ಎಂದಿದ್ದರು’ ಎಂದು ಟೀಕಾ ಪ್ರಹಾರ ನಡೆಸಿದ್ದರು. ಈ ಮೂಲಕ ಮನಮೋಹನ್ ಸಿಂಗ್ ಅವರಿಗೂ ಟಾಂಗ್ ಕೊಟ್ಟಿದ್ದರು.

ಈಗ ಅದೇ ವಿಚಾರವಾಗಿ ಮನಮೋಹನ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ‘ಚುನಾವಣೆ ಸಂದರ್ಭದಲ್ಲಿ ಬಂದತಂಹ ಹೇಳಿಕೆಗಳನ್ನು ನಾನು ಎಚ್ಚರಿಕೆಯಿಂದ ಗಮನಿಸುತ್ತಿದ್ದೆ. ಮೋದಿಜಿ ಸದಾ ಧ್ವೇಷದ ಬೀಜ ಬಿತ್ತುವ ಭಾಷಣಗಳನ್ನು ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿ ಹುದ್ದೆಗೆ ಅದರದ್ದೇ ಆದ ಗಾಂಭೀರ್ಯತೆಯಿದೆ. ಆದರೆ ಮೋದಿ ಆ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ವ್ಯಕ್ತಿ. ಒಬ್ಬ ಪ್ರಧಾನಿ ಎಂಬುದನ್ನೂ ಮರೆತು ಅವರು ವಿಪಕ್ಷಗಳ ವಿರುದ್ಧ ಅತ್ಯಂತ ಕೀಳುಮಟ್ಟದ ಟೀಕೆ ಮಾಡುತ್ತಾ ಬಂದಿದ್ದಾರೆ. ನಾನು ಪ್ರಧಾನಿಯಾಗಿದ್ದಾಗ ಯಾವತ್ತೂ ಒಂದು ಸಮುದಾಯವನ್ನು ಕಡೆಗಣಿಸಿ ಮತ್ತೊಂದು ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿಲ್ಲ’ ಎಂದಿದ್ದಾರೆ.

ಈ ದೇಶದಲ್ಲಿ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಒದಗಿಸಿಕೊಡಲು ಸಾಧ್ಯವಾಗುತ್ತದೆ ಎಂದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದ ಮನಮೋಹನ್ ಸಿಂಗ್ ಪಂಜಾಬ್ ಮತದಾರರಿಗೆ ಅಭಿವೃದ್ಧಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಿಂದ ಮತ ಹಾಕಿ ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments