ಮನ್ ಕೀ ಬಾತ್; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಮೋದಿ

Webdunia
ಭಾನುವಾರ, 17 ಅಕ್ಟೋಬರ್ 2021 (10:55 IST)
ದೆಹಲಿ : ಅಕ್ಟೋಬರ್ 24ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನ 82ನೇ ಆವೃತ್ತಿಯಲ್ಲಿ ಮಾತನಾಡಲಿದ್ದಾರೆ. ಈ 82ನೇ ಎಪಿಸೋಡ್ನ ಮನ್ ಕೀ ಬಾತ್ಗಾಗಿ ವಿಚಾರಗಳು,  ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳೂ ಈ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದರಲ್ಲಿ ಅವರು ರಾಜಕೀಯ ಹೊರತಾಗಿ ಬೇರೆ ವಿಶೇಷ ವಿಷಯಗಳ ಬಗ್ಗೆ ಉಲ್ಲೇಖ ಮಾಡುತ್ತಾರೆ. ಕಳೆದ ಮನ್ ಕೀ ಬಾತ್ನಲ್ಲಿ ನದಿಗಳ ಮಹತ್ವ ತಿಳಿಸಿದ್ದರು. ನದಿಗಳ ದಿನದ ನೆನಪು ಮಾಡಿಕೊಟ್ಟಿದ್ದರು. ಹಾಗೇ ಟ್ವೀಟ್ ಮಾಡಿ, ಈ ತಿಂಗಳ ಮನ್ ಕೀ ಬಾತ್ಗಾಗಿ ಅನಿಸಿಕೆ ಹಂಚಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ದೇಶದಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ಭರ್ಜರಿಯಾಗಿ ಸಾಗುತ್ತಿದೆ. ಮುಂದಿನ ವಾರ 100 ಕೋಟಿ ಗಡಿಯನ್ನೂ ದಾಟಿ ದಾಖಲೆ ನಿರ್ಮಿಸಲಿದೆ. ಇದರ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣವೂ ತುಸು ಕಡಿಮೆಯಾಗಿದ್ದು, ಕೊವಿಡ್ 19 ಶಿಷ್ಟಾಚಾರಗಳ ಪಾಲನೆಯಲ್ಲೂ ಸಡಿಲತೆ ಕಂಡುಬಂದಿದೆ. ಹೀಗೆ ಸುಮಾರು ವಿಷಯಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್ ಕೀ ಬಾತ್ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಮುಂದಿನ ಸುದ್ದಿ
Show comments