Webdunia - Bharat's app for daily news and videos

Install App

ಮನ್ ಕೀ ಬಾತ್; ಸಾರ್ವಜನಿಕರಿಂದ ಅನಿಸಿಕೆ ಆಹ್ವಾನಿಸಿದ ಮೋದಿ

Webdunia
ಭಾನುವಾರ, 17 ಅಕ್ಟೋಬರ್ 2021 (10:55 IST)
ದೆಹಲಿ : ಅಕ್ಟೋಬರ್ 24ರಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನ 82ನೇ ಆವೃತ್ತಿಯಲ್ಲಿ ಮಾತನಾಡಲಿದ್ದಾರೆ. ಈ 82ನೇ ಎಪಿಸೋಡ್ನ ಮನ್ ಕೀ ಬಾತ್ಗಾಗಿ ವಿಚಾರಗಳು,  ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳೂ ಈ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆ. ಇದರಲ್ಲಿ ಅವರು ರಾಜಕೀಯ ಹೊರತಾಗಿ ಬೇರೆ ವಿಶೇಷ ವಿಷಯಗಳ ಬಗ್ಗೆ ಉಲ್ಲೇಖ ಮಾಡುತ್ತಾರೆ. ಕಳೆದ ಮನ್ ಕೀ ಬಾತ್ನಲ್ಲಿ ನದಿಗಳ ಮಹತ್ವ ತಿಳಿಸಿದ್ದರು. ನದಿಗಳ ದಿನದ ನೆನಪು ಮಾಡಿಕೊಟ್ಟಿದ್ದರು. ಹಾಗೇ ಟ್ವೀಟ್ ಮಾಡಿ, ಈ ತಿಂಗಳ ಮನ್ ಕೀ ಬಾತ್ಗಾಗಿ ಅನಿಸಿಕೆ ಹಂಚಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ದೇಶದಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ಭರ್ಜರಿಯಾಗಿ ಸಾಗುತ್ತಿದೆ. ಮುಂದಿನ ವಾರ 100 ಕೋಟಿ ಗಡಿಯನ್ನೂ ದಾಟಿ ದಾಖಲೆ ನಿರ್ಮಿಸಲಿದೆ. ಇದರ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣವೂ ತುಸು ಕಡಿಮೆಯಾಗಿದ್ದು, ಕೊವಿಡ್ 19 ಶಿಷ್ಟಾಚಾರಗಳ ಪಾಲನೆಯಲ್ಲೂ ಸಡಿಲತೆ ಕಂಡುಬಂದಿದೆ. ಹೀಗೆ ಸುಮಾರು ವಿಷಯಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಬಾರಿ ತಮ್ಮ ಮನ್ ಕೀ ಬಾತ್ನಲ್ಲಿ ಯಾವ ವಿಚಾರವನ್ನು ಮಾತಿಗೆ ಎತ್ತಿಕೊಳ್ಳಬಹುದು ಎಂಬುದು ಕುತೂಹಲ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments