Webdunia - Bharat's app for daily news and videos

Install App

ದೆಹಲಿ ಕೊಳ್ಳೆಗಾರರು ಗೋವಾ ಮೇಲೆ ಕಣ್ಣಿಟ್ಟಿದ್ದಾರೆ: ಆಪ್ ವಿರುದ್ಧ ಮನೋಹರ್ ಪರಿಕ್ಕರ್

Webdunia
ಗುರುವಾರ, 7 ಜುಲೈ 2016 (17:47 IST)
ದೆಹಲಿಯಂತೆ ಗೋವಾದಲ್ಲಿ ಕೂಡ ಛಾಪು ಮೂಡಿಸಲು ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಕೇಂದ್ರ ರಕ್ಷಣಾ ಸಚಿವ, ಬಿಜೆಪಿಯ ಹಿರಿಯ ನಾಯಕ ಮನೋಹರ ಪರಿಕ್ಕರ್ ಹರಿಹಾಯ್ದಿದ್ದಾರೆ. 

ದೆಹಲಿಯನ್ನು ಕೊಳ್ಳೆ ಹೊಡೆದ ಬಳಿಕ ಕೆಲವರೀಗ ಗೋವಾ ಮೇಲೆ ಕಣ್ಣಿಟ್ಟಿದ್ದಾರೆ ಎಂದ ಅವರು ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು "ಮುಂಗಾರಿನ ಹುಲ್ಲಿಗೆ" ಹೋಲಿಸಿದ್ದಾರೆ. 
 
ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರ 60 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ನಾಗರಿಕ ಸತ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನ್ನಾಡುತ್ತಿದ್ದ ಅವರು, ನಾನು ಗೋವಾಕ್ಕೆ ನಿಯಮಿತ ಭೇಟಿ ನೀಡುತ್ತಿರುವುದು ದೆಹಲಿಯ ಕೆಲವರಿಗೆ ಚಿಂತೆಯನ್ನು ತರಿಸಿದೆ. ಗೋವದಲ್ಲಿ ಚುನಾವಣೆ ಗೆಲ್ಲುವ ಅವರ ಮಹಾತ್ವಾಕಾಂಕ್ಷೆಗೆ ನಾನು ಅಡ್ಡಿಯಾಗುತ್ತೇನೆ ಎಂಬುದು ಅವರ ಭಯ. ಅವರು ಗೋವಾ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಆಪ್ ಹೆಸರೆತ್ತದೆ ಪರಿಕ್ಕರ್ ಚಾಟಿ ಬೀಸಿದ್ದಾರೆ. 
 
ಪರಿಕ್ಕರ್ ತಮ್ಮ ಸಚಿವಾಲಯಕ್ಕಿಂತ ಗೋವಾ ಕಡೆಗೆ ಹೆಚ್ಚು ಗಮನ ನೀಡುತ್ತಾರೆ ಎಂದು ದೆಹಲಿ ಸಿಎಂ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವ್ಯಂಗ್ಯವಾಡಿದ್ದರು. ಸ್ವಲ್ಪ ತಡವಾದರೂ ಖಡಕ್ ಆಗಿ ಕೇಜ್ರಿಗೀಗ ಟಾಂಗ್ ನೀಡಿದ್ದಾರೆ ಪರಿಕ್ಕರ್.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments