Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಬೆಂಕಿ ಅವಘಡದಿಂದ ಸಾಕಷ್ಟು ಮಂದಿ ದುರ್ಮರಣ!

webdunia
ಮಂಗಳವಾರ, 13 ಸೆಪ್ಟಂಬರ್ 2022 (15:27 IST)
ಹೈದರಾಬಾದ್ : ತೆಲಂಗಾಣದ ಸಿಕಂದರಾಬಾದ್ನಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
 
ಕಟ್ಟಡದ ನೆಲಮಹಡಿಯಲ್ಲಿರುವ ರೂಬಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶೀಘ್ರದಲ್ಲೇ ಮೊದಲ ಮತ್ತು ಎರಡನೇ ಮಹಡಿಗೂ ವ್ಯಾಪಿಸಿದೆ. ಪರಿಣಾಮವಾಗಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಆಹಾರ ಪದಾರ್ಥಗಳು ದುಬಾರಿ!