Webdunia - Bharat's app for daily news and videos

Install App

ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್: ಆಪ್ತ ಕಾರ್ಯದರ್ಶಿ ಬಂಧನಕ್ಕೆ ಮಾರನ್ ಟೀಕೆ

Webdunia
ಗುರುವಾರ, 22 ಜನವರಿ 2015 (10:03 IST)
ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್ ಸ್ಥಾಪನೆಗೆ ಸಂಬಂಧಿಸಿದಂತೆ ತಮ್ಮ ಆಪ್ತ ಕಾರ್ಯದರ್ಶಿ ಬಂಧನವನ್ನು ದಯಾನಿಧಿ ಮಾರನ್ ಟೀಕಿಸಿದ್ದಾರೆ. ತಮಿಳುನಾಡಿನ ಆರ್‌ಎಸ್‌ಎಸ್ ಮುಖಂಡರನ್ನು ತೃಪ್ತಿಪಡಿಸಲು ಬಂಧಿಸಲಾಗಿದೆ ಎಂದು ದಯಾನಿಧಿ ಮಾರನ್ ಆರೋಪಿಸಿದ್ದಾರೆ.

ಬಂಧಿತರಿಗೆ ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್ ನೀಡಲಾಗಿದೆ. ಈ ಬಗ್ಗೆ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯುತ್ತೇನೆ. ನನ್ನ ವಿರುದ್ಧ ಹೇಳಿಕೆ ನೀಡುವಂತೆ ಹಿಂಸಿಸಲಾಗಿದೆ ಎಂದೂ ಅವರು ಆರೋಪಿಸಿದ್ದಾರೆ.
 
ಸಿಬಿಐ ಬುಧವಾರ ರಾತ್ರಿ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಅವರ ಆಪ್ತ ಕಾರ್ಯದರ್ಶಿ ಸೇರಿದಂತೆ ಮೂವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿತ್ತು. ನವದೆಹಲಿಯಿಂದ ಬಂದಿದ್ದ ಸಿಬಿಐ ವಿಶೇಷ ಕಾರ್ಯಪಡೆಯ ತಂಡ ಮಾರನ್ ಮಾಜಿ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಕಣ್ಣನ್ ಮತ್ತು ಮೂವರನ್ನು ಬಂಧಿಸಿತ್ತು. ಅವರನ್ನು ನಗರ ಕೋರ್ಟ್‌ಗೆ ಹಾಜರುಪಡಿಸಿ ತನಿಖೆಗೆ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮಾರನ್ ಮನೆಯಲ್ಲಿ ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್ ಸ್ಥಾಪಿಸುವ ಮೂಲಕ ಡೇಟಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿತ್ತೆಂದು ಆರೋಪಿಸಲಾಗಿದೆ. ಈ ಉದ್ದೇಶಕ್ಕಾಗಿ ಅಧಿಕ ವೇಗದ ಟೆಲಿಫೋನ್ ಮಾರ್ಗಗಳನ್ನು ಮಂಜೂರು ಮಾಡಿದ ಬಿಎಸ್ಎನ್‌ಎಲ್ ಅಧಿಕಾರಿಗಳು ಮತ್ತು ಮಾರನ್ ವಿರುದ್ಧ ಕೇಸು ದಾಖಲಿಸಲಾಗಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments