Webdunia - Bharat's app for daily news and videos

Install App

ಪಂಜಾಬ್‌ ನಲ್ಲಿ ಮೆರವಣಿಗೆ ವೇಳೆ ಘರ್ಷಣೆ: ಪೊಲೀಸರಿಂದ ಗಾಳಿಯಲ್ಲಿ ಗುಂಡು

Webdunia
ಶುಕ್ರವಾರ, 29 ಏಪ್ರಿಲ್ 2022 (16:27 IST)
ಖಾಲಿಸ್ತಾನಿ ಪ್ರತ್ಯೇಕವಾದಿಗಳ ವಿರುದ್ದದ ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ವಿಕೋಪಕ್ಕೆ ತಿರುಗಿದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ ಘಟನೆ ಶುಕ್ರವಾರ ಪಂಜಾಬಿನ ಪಟಿಯಾಲದ ಕಾಳಿ ದೇವಾಲಯದ ಬಳಿ ನಡೆದಿದೆ.
ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಬಸ್‌ ಗೆ ಬೆಂಕಿ ಹಚ್ಚಿದ್ದರಿಂದ ಒಬ್ಬ ಬಸ್‌ ಕಂಡಕ್ಟರ್‌ ಮೃತಪಟ್ಟಿದ್ದು, ಮೂರು ಬಸ್‌ ಗಳು ಆಹುತಿಯಾಗಿದ್ದವು.
ಶಿವಸೇನೆ ಕಾರ್ಯಕರ್ತರು ಕಾಳಿ ದೇವಸ್ಥಾನ ಬಳಿ ಬರುತ್ತಿದ್ದಂತೆ ಖಾಲಿಸ್ತಾನ ಪ್ರತ್ಯೇಕವಾದಿಗಳ ವಿರುದ್ಧ ಘೋಷಣೆ ಕೂಗಿದ್ದರಿಂದ ಘರ್ಷಣೆ ಆರಂಭವಾಗಿದೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇದು ದುರದೃಷ್ಟಕರ ಸಂಗತಿ ಮತ್ತು ತಮ್ಮ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ನಾನು ಘಟನೆ ಕುರಿತು ಡಿಜಿಪಿಯೊಂದಿಗೆ ಚರ್ಚಿಸಿದ್ದೇನೆ ಘಟನೆ ನಡೆದ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಹೇಳಿದ್ದೇನೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಯಾರಿಗೂ ಬಿಡುವುದಿಲ್ಲ. ಪಂಜಾಬಿನಲ್ಲಿ ಶಾಂತಿ ಸೌಹಾರ್ದತೆ ಅತ್ಯಂತ ಮಹತ್ವವಾದ್ದು ಎಂದು ಟ್ವೀಟ್ ನಲ್ಲಿ ವಿವರಿಸಿದ್ದಾರೆ.
ಪರಿಸ್ಥಿತಿ ಸದ್ಯ ಹತ್ತೋಟಿಗೆ ಬಂದಿದ್ದು ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಆ ಗುಂಪುಗಳ ಸದಸ್ಯರು ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಜಿಲ್ಲೆಯ ಜನರು ಅಹಿತಕರ ಘಟನೆಗಳು ಆಗದಂತೆ ಶಾಂತಿ ಕಾಪಾಡುವಂತೆ ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಸಾಕ್ಷಿ ಸಾಹಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments