Webdunia - Bharat's app for daily news and videos

Install App

ಅತ್ತಿಗೆಯೊಂದಿಗೆ ಮದುವೆ- ಮನನೊಂದು ಬಾಲಕ ಆತ್ಮಹತ್ಯೆ

Webdunia
ಗುರುವಾರ, 14 ಡಿಸೆಂಬರ್ 2017 (13:39 IST)
ಹಿರಿಯರು ಮಾಡಿದ ಬಲವಂತದಿಂದ ಅತ್ತಿಗೆಯನ್ನು ಮದುವೆಯಾಗಿದ್ದ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ.
 
ಬಿಹಾರ ರಾಜ್ಯದ ಗಯಾ ಜಿಲ್ಲೆಯ ವಿನೋಭಾ ನಗರದ ಮಹದೇವ್ ಕುಮಾರ್ ದಾಸ್ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ. 9ನೇ ತರಗತಿ ಓದುತ್ತಿದ್ದ ಬಾಲಕನಿಗೆ ತನಗಿಂತ 10 ವರ್ಷ ದೊಡ್ಡವರಾದ ಅತ್ತಿಗೆ ರೂಬಿ ದೇವಿಯೊಂದಿಗೆ ಮದುವೆ ಮಾಡಲಾಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
 
ಬಾಲಕನ ಅಣ್ಣ ಸಂತೋಷ್ ಕುಮಾರ್ ದಾಸ್, 2013ರಲ್ಲಿ ಎಲೆಕ್ಟ್ರಿಕ್ ಶಾಪ್ ನಲ್ಲಿ ಕೆಲಸ ಮಾಡುವಾಗ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ್ದರು. ಮಹದೇವ್ ತನ್ನ ಅತ್ತಿಗೆಯನ್ನು ತಾಯಿಯ ರೂಪದಲ್ಲಿ ಕಾಣುತ್ತಿದ್ದನು. ಆದರೂ ಮಹದೇವ್ ಪೋಷಕರು ಬಲವಂತವಾಗಿ ಮದುವೆ ಮಾಡಿಸಿದ್ದರು.
 
ಸಂತೋಷ್ ಕುಮಾರ್ ಸಾವನ್ನಪ್ಪಿದ ಬಳಿಕ 80 ಸಾವಿರ ರೂಪಾಯಿ ಪರಿಹಾರ ಹಣ ಬಂದಿತ್ತು. ಈ ಹಣಕ್ಕಾಗಿ ರೂಬಿದೇವಿ ಪೋಷಕರು ಹಾಗೂ ಪತಿಯ ಮನೆಯವರ ನಡುವೆ ಗಲಾಟೆ ನಡೆದಿತ್ತು. ರೂಬಿದೇವಿಯ ಮಾವ ಚಂದ್ರೇಶ್ವರ್ ದಾಸ್ ತನ್ನ ಕಿರಿಯ ಮಗನೊಂದಿಗೆ ಸೊಸೆಯ ಮದುವೆ ಮಾಡುತ್ತೇನೆ ಎಂದು ಹೇಳಿ ರೂಬಿದೇವಿ ಪೋಷಕರಿಗೆ ಕೇವಲ 27 ಸಾವಿರ ಹಣ ನೀಡಿದ್ದ. ಹೀಗಾಗಿ ಮಹದೇವ ಪೋಷಕರು ಹಣದ ದುರಾಸೆಗಾಗಿ ಮಗನಿಗಿಂತ ದೊಡ್ಡವರಾದ ಅತ್ತಿಗೆಯೊಂದಿಗೆ ವಿವಾಹ ಮಾಡಿಸಿದ್ದರು.
 
ರೂಬಿದೇವಿಗೆ 5 ವರ್ಷದ ಮತ್ತು 7 ವರ್ಷದ ಇಬ್ಬರು ಮಕ್ಕಳಿದ್ದಾರೆ. ಮಹದೇವ್ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments