Webdunia - Bharat's app for daily news and videos

Install App

ತಂದೆಯ ಕೆಲಸ ಪಡೆಯಲು ವಿವಾಹಿತ ಪುತ್ರಿಯೂ ಅರ್ಹಳು: ಕೋರ್ಟ್

Webdunia
ಬುಧವಾರ, 22 ನವೆಂಬರ್ 2023 (13:16 IST)
ವಿವಾಹಿತ ಮಗ ಮತ್ತು ವಿವಾಹಿತ ಮಗಳ ನಡುವೆ ಯಾವುದೇ ತಾರತಮ್ಯ ತೋರಲು ಸಾಧ್ಯವಿಲ್ಲ. ವೈವಾಹಿಕ ಸ್ಥಿತಿಯ ಆಧಾರದ ಮೇಲೆ  ಮಗ ಮತ್ತು ಮಗಳ ನಡುವೆ ತಾರತಮ್ಯ ಮಾಡುವುದು ನಿರಂಕುಶತೆಯ ಪ್ರತೀಕ ಮತ್ತು ಸಮಾನತೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು  ನ್ಯಾಯಮೂರ್ತಿ ಕಳೆದ ವಾರ ನೀಡಿದ ಮಹತ್ವಪೂರ್ಣ ಪ್ರಕರಣವೊಂದರ ತೀರ್ಪಿನ ಸಂದರ್ಭದಲ್ಲಿ ಹೇಳಿದ್ದಾರೆ. 
 
ಸೇವೆಯಲ್ಲಿದ್ದಾಗಲೇ ಮರಣ ಹೊಂದಿದ ಸರ್ಕಾರಿ ಉದ್ಯೋಗಿಯ ವಿವಾಹಿತ ಮಗ ತಂದೆಯ ಕೆಲಸವನ್ನು ಪಡೆಯಲು ಅರ್ಹನಾಗಿರುತ್ತಾರೆ. ಆದರೆ ಮೃತನ ವಿವಾಹಿತ ಮಗಳಿಗೆ ಅನುಕಂಪದ ಆಧಾರದ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾಗುವುದಿಲ್ಲ ಎಂಬ ಸರಕಾರದ ನಿಯಮಕ್ಕೆ ಮದ್ರಾಸ್ ಹೈಕೋರ್ಟ್ ಆಶ್ಚರ್ಯವನ್ನು ವ್ಯಕ್ತ ಪಡಿಸಿದೆ.
 
ಈ ಪ್ರಕರಣ ರೇಣುಕಾ ಎಂಬುವವರಿಗೆ ಸಂಬಂಧಿಸಿದೆ. ಪಶುಸಂಗೋಪನೆ ಇಲಾಖೆಯಲ್ಲಿ ಕಚೇರಿ ಸಹಾಯಕನಾಗಿ ಸೇವೆ ಸಲ್ಲಿಸುತ್ತಿದ್ದ ಆಕೆಯ ತಂದೆ ಸೇವೆಯಲ್ಲಿದ್ದಾಗಲೇ ತೀರಿಕೊಂಡಿದ್ದರು. ತನ್ನ ಪತ್ನಿ ಮತ್ತು ಮೂವರು ಮದುವೆಯಾದ ಹೆಣ್ಣುಮಕ್ಕಳು ಮತ್ತು  ಅವಿವಾಹಿತ ಮಗಳೊಬ್ಬರನ್ನವರು ಅಗಲಿದ್ದರು.  
 
ಎಲ್ಲ ಮಕ್ಕಳಲ್ಲಿ ಹಿರಿಯವಳಾಗಿದ್ದ ರೇಣುಕಾ ಗಂಡನಿಂದ ಪರಿತ್ಯಜಿಸಲ್ಪಟ್ಟಿದ್ದರು ಮತ್ತು ತಂದೆಯ ಸಾವಿನ ಸಮಯದಲ್ಲಿ ತವರಿನಲ್ಲಿದ್ದರು. ಅನುಕಂಪದ ಆಧಾರದ ಮೇಲೆ ತನ್ನ ತಂದೆಯ ಕೆಲಸ ತನಗೆ ಕೊಡಬೇಕೆಂದು ಆಕೆ ಸಂಬಂಧಿಸಿದ ಇಲಾಖೆಗೆ ಮನವಿ ಸಲ್ಲಿಸಿದ್ದಳು. ಆದರೆ ಆಕೆಗಾಗಲೇ ಮದುವೆಯಾಗಿದ್ದರಿಂದ ಸರಕಾರ ಆಕೆಗೆ ತಂದೆಯಿಂದ ತೆರವಾಗಿದ್ದ ಕೆಲಸವನ್ನು ನೀಡಲು ನಿರಾಕರಿಸಿತ್ತು. ಸರಕಾರದ ಈ ಕ್ರಮವನ್ನು ಪ್ರಶ್ನಿಸಿ ಆಕೆ ಕೋರ್ಟ್ ಮೆಟ್ಟಿಲೇರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments