Webdunia - Bharat's app for daily news and videos

Install App

ಸಿಎಂ ಯೋಗಿ ಹೋದ ಮೇಲೆ ಯೋಧನ ಮನೆಯಿಂದ ಸೋಫಾವೂ ಹೋಯ್ತು!

Webdunia
ಸೋಮವಾರ, 15 ಮೇ 2017 (09:30 IST)
ಲಕ್ನೋ: ನಮ್ಮ ದೇಶದಲ್ಲಿ ಇದು ಹೊಸದಲ್ಲ. ವಿಐಪಿಗಳು ಬರುವಾಗ ಅವರ ಕಣ್ಣಿಗೆ ಮಣ್ಣೆರಚಲು ಅಧಿಕಾರಿಗಳು ರಸ್ತೆ ರಿಪೇರಿ ಮಾಡಿಸುವುದು, ಗುಡಿಸಲನ್ನು ಅರಮನೆಯಾಗಿ ಮಾಡುವುದೆಲ್ಲಾ ಮಾಮೂಲಿ. ಅಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

 
ಸಿಎಂ ಯೋಗಿ ಆದಿತ್ಯನಾಥ್ ಪಾಕ್ ಯೋಧರಿಂದ ಶಿರಚ್ಛೇದಕ್ಕೊಳಗಾದ ಹುತಾತ್ಮ ಯೋಧ ಪ್ರೇಮ್ ಸಾಗರ್ ಮನೆಗೆ ಭೇಟಿ ನೀಡುವವರಿದ್ದರು. ಅವರು ಬರುವ ಸುದ್ದಿ ತಿಳಿದ ಅಧಿಕಾರಿಗಳು ಯೋಧನ ಮನೆಗೆ ಸೋಫಾ, ಎಸಿ ವ್ಯವಸ್ಥೆ, ಟವೆಲ್, ಫ್ಯಾನ್ ಎಲ್ಲಾ ವ್ಯವಸ್ಥೆ ಮಾಡಿದ್ದರು.

ಸಿಎಂ ಹತ್ತು ನಿಮಿಷ ಕುಟುಂಬದವರೊಂದಿಗೆ ಕಳೆದು ಮರಳಿದ ಮೇಲೆ ಅಧಿಕಾರಿಗಳು ತಾವು ಫಿಟ್ ಮಾಡಿದ್ದ ವಸ್ತುಗಳನ್ನೆಲ್ಲಾ ಹೊತ್ತೊಯ್ದರು. ಈ ರೀತಿ ದೇಶಕ್ಕಾಗಿ ಪ್ರಾಣ ತೆತ್ತ ಯೋಧನ ಕುಟುಂಬಕ್ಕೆ ಅಕ್ಷರಶಃ ಅವಮಾನ ಮಾಡಲಾಗಿದೆ.

ಹುತಾತ್ಮ ಯೋಧನ ಶವ ಸಂಸ್ಕಾರಕ್ಕೆ ಮುಖ್ಯಮಂತ್ರಿಗಳು ಬರಲೇಬೇಕೆಂದು ಯೋಧನ ಕುಟುಂಬ ಹಠ ಹಿಡಿದಿತ್ತು. ಆದರೆ ಆಗ ಸಿಎಂ ಕುಟುಂಬದವರ ಜತೆ ದೂರವಾಣಿಯಲ್ಲಿ ಮಾತನಾಡಿ ಮುಂದೊಂದು ದಿನ ಖಂಡಿತಾ ನಿಮ್ಮನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments