Webdunia - Bharat's app for daily news and videos

Install App

ಜನ್ಮದಿನದಂದೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

Webdunia
ಮಂಗಳವಾರ, 1 ಮಾರ್ಚ್ 2022 (10:47 IST)
ಮನೆ ಬಿಟ್ಟು ಬಂದಿದ್ದ ಬಾಲಕಿಯನ್ನು ಪುಸಲಾಯಿಸಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.
 
ತಾಲೂಕಿನ ಹುದುಕುಳ ಗ್ರಾಮದ 9ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ತನ್ನ ಜನ್ಮದಿನವಾದ ಶುಕ್ರವಾರ ಹೊಸ ಬಟ್ಟೆ ಹಾಗೂ ಚಾಕ್ಲೇಟ್ಸ್ ಕೊಡಿಸಿಲ್ಲವೆಂದು ಪೋಷಕರ ವಿರುದ್ಧ ಮುನಿಸಿಕೊಂಡು ಶಾಲೆಗೂ ಹೋಗದೆ, ಮನೆಯವರಿಗೂ ತಿಳಿಸದೆ ಬಸ್ ಹತ್ತಿ ಬಂಗಾರಪೇಟೆಗೆ ಬಂದಿದ್ದಳು.

ಬಸ್ ನಿಲ್ದಾಣದಲ್ಲಿ ಒಬ್ಬಳೇ ಕುತಿಳಿದ್ದ ವಿದ್ಯಾರ್ಥಿನಿಯನ್ನು ಗಮನಿಸಿದ ನಾಲ್ವರು ದುಷ್ಕರ್ಮಿಗಳು ಆಕೆಯನ್ನು ಪುಸಲಾಯಿಸಿ ಪಾರ್ಕ್ಗೆ ಕರೆದುಕೊಂಡು ಹೋಗಿ ಸಂಜೆವರೆಗೂ ಕಾಲ ಕಳೆದಿದ್ದಾರೆ.

ಬಳಿಕ ಪಟ್ಟಣದಿಂದ ಆಂಧ್ರಗಡಿಗೆ ಅಂಟಿಕೊಂಡಿರುವ ತನಿಮಡಗು ಗ್ರಾಮಕ್ಕೆ ಖಾಸಗಿ ಬಸ್ನಲ್ಲಿ ಕರೆದುಕೊಂಡು ಹೋಗಿದ್ದಾರೆ. ರಾತ್ರಿ ಗಡಿಯಲ್ಲಿರುವ ಬಾರ್ನಲ್ಲಿ ನಾಲ್ವರು ಆರೋಪಗಳು ಕುಡಿದು ಬಳಿಕ ಸುತ್ತಮುತ್ತಲಿರುವ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಈ ವೇಳೆ ಬಾಲಕಿಯ ಕಿರುಚಾಟ ಕೇಳಿದ ದಾರಿಹೋಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಬಾಲಕಿಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments