Webdunia - Bharat's app for daily news and videos

Install App

ಜಯಾ ಸಮಾಧಿ ಬಳಿ ಅಭಿಮಾನಿಗಳ ಸಾಮೂಹಿಕ ಕೇಶಮುಂಡನ

Webdunia
ಬುಧವಾರ, 7 ಡಿಸೆಂಬರ್ 2016 (10:36 IST)
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಸಮಾಧಿ ಬಳಿ ಅವರ ಸಮಾಧಿ ಪಕ್ಕದಲ್ಲಿ ಕೇಶಮುಂಡನ ಮಾಡಿಸಿಕೊಳ್ಳುತ್ತಿದ್ದಾರೆ.
ಮರೀನಾ ಬೀಚ್‌ನಲ್ಲಿರುವ ಜಯಾ ಸಮಾಧಿ ಬಳಿ ಜನಸಾಗರವೇ ಹರಿದು ಬರುತ್ತಿದೆ. ನಿನ್ನೆ ಜಯಾ ಅವರ ಅಂತಿಮ ದರ್ಶನ ಪಡೆಯಲು ಸಾಧ್ಯವಾಗದಿದ್ದವರು ಇಂದು ಸಮಾಧಿಗೆ ತೆರಳಿ ಗೌರವ ಸಲ್ಲಿಸುತ್ತಿದ್ದಾರೆ. ಅವರಲ್ಲಿ ಕೆಲವರು ಸಮಾಧಿ ಪಕ್ಕದಲ್ಲಿ ಕುಳಿತು  ಸ್ವಇಚ್ಛೆಯಿಂದ ಕೇಶಮುಂಡನ ಮಾಡಿಸಿಕೊಂಡು ಜಯಾ ಅವರಿಗೆ ಶ್ರಂದ್ಧಾಂಜಲಿ ಸಲ್ಲಿಸುತ್ತಿದ್ದಾರೆ.  
 
ಈ ಕುರಿತು ಪ್ರತಿಕ್ರಿಯಿಸಿರುವ ಅಭಿಮಾನಿಯೊಬ್ಬರು, ಜಯಲಲಿತಾ ಸಂಪೂರ್ಣ ತಮಿಳುನಾಡಿಗೆ ಅಮ್ಮ ಇದ್ದಂತೆ. ಹೀಗಾಗಿ ಕೇಶಮುಂಡನ ಮಾಡಿಸಿಕೊಳ್ಳುತ್ತಿದ್ದೇವೆ ಎನ್ನುತ್ತಾರೆ. 
 
ವಿದೇಶ ಪ್ರಯಾಣದಲ್ಲಿದ್ದ ತಮಿಳಿನ ಪ್ರಸಿದ್ಧ ನಟ ಅಜಿತ್ ಸಹ ತಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಇಂದು ಮುಂಜಾನೆ ಚೆನ್ನೈಗೆ ಮರಳಿ ನೇರವಾಗಿ ಮರೀನಾ ಬೀಚ್‌ಗೆ ತೆರಳಿ ಜಯಾ ಸಮಾಧಿಗೆ ಗೌರವವನ್ನು ಸಮರ್ಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments