Select Your Language

Notifications

webdunia
webdunia
webdunia
webdunia

4 ಟಿಎಂಸಿ ಕಾರ್ಯಕರ್ತರ ಸಾವು; ಬಾಂಬ್ ದಾಳಿ ನಡೆಸಿತೇ ಕಾಂಗ್ರೆಸ್?

4 ಟಿಎಂಸಿ ಕಾರ್ಯಕರ್ತರ ಸಾವು; ಬಾಂಬ್ ದಾಳಿ ನಡೆಸಿತೇ ಕಾಂಗ್ರೆಸ್?
ಮಾಲ್ದಾ , ಸೋಮವಾರ, 2 ಮೇ 2016 (11:47 IST)
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಜನ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. 
 
ಕಾಂಗ್ರೆಸ್ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಈ ಗಲಾಟೆ ನಡೆದಿದ್ದು ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 
 
ಕಾಂಗ್ರೆಸ್ ನಾಯಕರು ನಮ್ಮ ಮೇಲೆ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಸಾವನ್ನಪ್ಪಿ ಮತ್ತೆ ಮೂವರು ಗಾಯಗೊಂಡಿದ್ದಾರೆ ಎಂದು ಟಿಎಂಸಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. 
 
ಶನಿವಾರ ಪಶ್ಚಿಮ ಬಂಗಾಳದಲ್ಲಿ ಐದನೆ ಮತ್ತು ಕೊನೆಯ ಹಂತದ ಮತದಾನ ನಡೆದಿದ್ದು 78.25% ಮತದಾನವಾಗಿದೆ. 
 
ಮತದಾನದ ಸಮಯದಲ್ಲಿ ನಡೆದ ಅಕ್ರಮ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 185 ಜನರನ್ನು ಬಂಧಿಸಲಾಗಿತ್ತು. ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.  
 
ಮೇ 19 ರಂದು ಪಶ್ಚಿ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದೆ. 


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ಜಿಂಕೆ ಬೇಟೆಗಾರರ ಬಂಧನ