Webdunia - Bharat's app for daily news and videos

Install App

ರಷ್ಯಾ ಯುವತಿಯ ಮೇಲೆ ಅತ್ಯಾಚಾರ: ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

Webdunia
ಶನಿವಾರ, 4 ನವೆಂಬರ್ 2017 (17:54 IST)
ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಬಂದಾಗಿನಿಂದಲೂ ರಾಷ್ಟ್ರೀಕೃತ ಬ್ಯಾಂಕ್‌ನ ಮ್ಯಾನೇಜರ್ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ರಷ್ಯಾದ ಯುವತಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಾಳೆ.
ರಷ್ಯಾದ 20 ವರ್ಷದ ಯುವತಿ, ಪೊಲೀಸರಿಗೆ ದೂರು ನೀಡಿದ್ದು, ಫೇಸ್‌ಬುಕ್ ಫ್ರೆಂಡ್‌ ಆಗಿದ್ದ ಮ್ಯಾನೇಜರ್ ಗೆಳೆತನವನ್ನು ದುರುಪಯೋಗಪಡಿಸಿಕೊಂಡು ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾಳೆ. 
 
ವೃಂದಾವನ ಶಾಖೆಯ ಯುಕೋ ಬ್ಯಾಂಕ್‌ ಮ್ಯಾನೇಜರ್ ಮಹೇಂದ್ರ ಪ್ರಸಾದ್ ಸಿಂಗ್‌ನನ್ನು ಯುವತಿಯ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಶಂಕರ್ ಮಿಶ್ರಾ ತಿಳಿಸಿದ್ದಾರೆ.  
 
ಆರೋಪಿ ಮಹೇಂದ್ರ ಪ್ರಸಾದ್ ನನ್ನ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಹಲವಾರು ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ. ಆತನನ್ನು ನಾನು ವೃಂದಾವನದಲ್ಲಿ ಭೇಟಿಯಾಗಿದ್ದೆ. ಯಾರಿಗಾದರೂ ಮಾಹಿತಿ ನೀಡಿದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದ ಎಂದು ತಿಳಿಸಿದ್ದಾಳೆ.
 
ಕಳೆದ 2016ರಲ್ಲಿ ರಷ್ಯಾದ ಯುವತಿ ಮತ್ತು ಬ್ಯಾಂಕ್ ಮ್ಯಾನೇಜರ್ ಫೇಸ್‌ಬುಕ್ ಗೆಳೆಯರಾಗಿದ್ದರು. ಆದನ ಆಹ್ವಾನದ ಮೇರೆಗೆ ಸೆಪ್ಟೆಂಬರ್ 17 ರಂದು ಯುವತಿ ಭಾರತಕ್ಕೆ ಬಂದು. ದೇವಾಲಯಗಳ ನಗರವಾದ ವೃಂದಾವನದಲ್ಲಿ ವಾಸ್ತವ್ಯ ಹೂಡಿದ್ದಳು.
 
ಸೆಪ್ಟೆಂಬರ್ 22 ರಂದು ನನ್ನನ್ನು ಯಾವುದೋ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ. ನಂತರ ಇದೇ ಮುಂದುವರಿದಿದೆ. ಮತ್ತೊಬ್ಬ ರಷ್ಯಾದ ಮಹಿಳೆಯೊಬ್ಬಳ ಸಲಹೆ ಮೇರೆಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾಳೆ. 
 
ಏತನ್ಮಧ್ಯೆ, ಕಳೆದ ಒಂದು ವರ್ಷದಿಂದ ರಷ್ಯಾದ ಯುವತಿಯೊಂದಿಗೆ ಯಾವುದೇ ಸಂಪರ್ಕವಿರಲಿಲ್ಲ. ಆಕೆ ನನಗೆ ಹಣ ಕೇಳಿದ್ದಾಳೆ. ಹಣ ನೀಡದ ಹಿನ್ನೆಲೆಯಲ್ಲಿ ನನ್ನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ಆರೋಪಿ ಮಹೇಂದ್ರ ಪ್ರಸಾದ್ ಉಲ್ಟಾ ಹೊಡೆದಿದ್ದಾನೆ. 
 
ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments