Webdunia - Bharat's app for daily news and videos

Install App

ವಿದ್ಯಾರ್ಥಿನಿಯೊಂದಿಗೆ ಗೆಳೆತನ ಬೆಳೆಸಿ ರೇಪ್‌ ಮಾಡಲು ಸ್ನೇಹಿತರನ್ನು ಕರೆದ ಕಾಮುಕ

Webdunia
ಭಾನುವಾರ, 16 ಜುಲೈ 2017 (13:55 IST)
ಶಾಲಾ ವಿದ್ಯಾರ್ಥಿನಿಯೊಂದಿಗೆ ಗೆಳೆತನ ಬೆಳೆಸಿದ ಪರಿಚಿತ ಕಾಮುಕನೊಬ್ಬ ತನ್ನ ಐವರು ಸ್ನೇಹಿತರೊಂದಿಗೆ ಆಕೆಯ ಮೇಲೆ ಗ್ಯಾಂಗ್ ರೇಪ್ ಎಸಗಿ ಭೀಕರವಾಗಿ ಹತ್ಯೆಗೈದು ಪರಾರಿಯಾದ ಘಟನೆ ವರದಿಯಾಗಿದೆ. 
 
15 ವರ್ಷದ ಶಾಲಾ ಬಾಲಕಿಯ ಶವ ದೊರೆಯುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಬಾಲಕಿಗೆ ಮತ್ತು ಆಕೆಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ನಗರದಲ್ಲಿ ಕೋಲಾಹಲ ಸೃಷ್ಟಿಸಿದ್ದರು.  
 
ಬಾಲಕಿಯ ಕುಟುಂಬಕ್ಕೆ ಆತ್ಮಿಯನಾಗಿದ್ದ ಮುಖ್ಯ ಆರೋಪಿ ರಾಜೀಂದರ್ ಸಿಂಗ್, ಬಾಲಕಿಯನ್ನು ಫುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ನಂತರ ತನ್ನ ಐವರು ಗೆಳೆಯರಿಗೆ ಕರೆ ಮಾಡಿ ಕರೆಸಿಕೊಂಡಿದ್ದಾನೆ. ಎಲ್ಲರು ಸೇರಿ ಗ್ಯಾಂಗ್‌ರೇಪ್ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
ಬಾಲಕಿ ಯಾರಿಗಾದರೂ ಮಾಹಿತಿ ನೀಡಬಹುದು ಎನ್ನುವ ಆತಂಕದಿಂದ ಆರೋಪಿಗಳು ಆಕೆಯನ್ನು ಹತ್ಯೆ ಮಾಡಿ ಅರಣ್ಯ ಪ್ರದೇಶದಲ್ಲಿ ಬಿಸಾಕಿ ಪರಾರಿಯಾಗಿದ್ದಾರೆ. ಶಾಲೆಯಿಂದ ಬಾಲಕಿ ಮನೆಗೆ ಬಾರದಿದ್ದಾಗ ಗಾಬರಿಗೊಂಡ ಆಕೆಯ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
 
ಘಟನೆಯಾದ ಎರಡು ದಿನಗಳ ನಂತರ ಹಲಿಯಾಲಾ ಅರಣ್ಯ ಪ್ರದೇಶದಲ್ಲಿ ನಗ್ನಳಾಗಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದೆ.
 
ಒಂದು ವಾರದ ನಂತರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ  ಇಬ್ಬರು ಆರೋಪಿಗಳು ನೇಪಾಳಿಗರಾಗಿದ್ದು, ಮತ್ತಿಬ್ಬರು ಆರೋಪಿಗಳು ಉತ್ತರಾಖಂಡ್ ರಾಜ್ಯಕ್ಕೆ ಸೇರಿದವರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments