Webdunia - Bharat's app for daily news and videos

Install App

ಮಾಯಾವತಿಯಿಂದ ದೇಶದ ಮಹಿಳೆಯರಿಗೆ ಅಪಮಾನ: ದಯಾಶಂಕರ್ ಸಿಂಗ್

Webdunia
ಗುರುವಾರ, 21 ಜುಲೈ 2016 (18:30 IST)
ಬಹಜನ ಸಮಾಜದ ಮುಖ್ಯಸ್ಥೆ ಮಾಯಾವತಿ ಲೋಕಸಭೆಯಲ್ಲಿ ಅವಹೇಳನಾಕಾರಿ ಭಾಷಣ ಮಾಡುವ ಮೂಲಕ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿಯ ಉಚ್ಚಾಟಿತ ನಾಯಕ ದಯಾಶಂಕರ್ ಸಿಂಗ್ ತಿರುಗೇಟು ನೀಡಿದ್ದಾರೆ.
 
ಮಾಧ್ಯಮ ವರದಿಗಳ ಪ್ರಕಾರ, ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ದಯಾಶಂಕರ್, ವೇಶ್ಯೆಯ ಬಗ್ಗೆ ಹೇಳಿಕೆ ನೀಡುತ್ತಿರುವಾಗ ತಾಯಂದಿರು ಮತ್ತು ಸಹೋದರಿಯರ ಉಲ್ಲೇಖ ಮಾಡಿ ಅಪಮಾನ ಮಾಡಿದ್ದಾರೆ ಕಿಡಿಕಾರಿದ್ದಾರೆ.
 
ಕಳೆದ ಬುಧವಾರದಂದು ಮಾಯಾವತಿ ಲೋಕಸಭೆಯಲ್ಲಿ ಮಾತನಾಡಿ ದಯಾಶಂಕರ್ ನನ್ನನ್ನು ಅಪಮಾನಿಸಿಲ್ಲ. ತಮ್ಮ ತಾಯಿ ಮತ್ತು ಸಹೋದರಿಯರನ್ನು ಮತ್ತು ದೇಶದ ಮಹಿಳೆಯರನ್ನು ಅಪಮಾನಿಸಿದ್ದಾರೆ. ಆತನನ್ನು ಕೂಡಲೇ ಬಂಧಿಸಬೇಕು. ಒಂದು ವೇಳೆ ಜನತೆ ಸಹನೆ ಮೀರಿ ಅನಾಹುತವಾದಲ್ಲಿ ಅದಕ್ಕೆ ನಾನು ಹೊಣೆಯಲ್ಲ ಎಂದು ಸ್ಪಷ್ಟಪಡಿಸಿದ್ದರು.
 
ಮಾಯಾವತಿ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದೀರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಲು ದಯಾಶಂಕರ್ ನಿರಾಕರಿಸಿದ್ದರು.
 
ಬಿಜೆಪಿ ಹೈಕಮಾಂಡ್, ದಯಾಶಂಕರ್ ಸಿಂಗ್ ಅವರನ್ನು ಇತ್ತೀಚೆಗೆ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಪಕ್ಷ ಆರು ವರ್ಷಗಳ ಕಾಲ ಉಚ್ಚಾಟಿಸಿರುವುದನ್ನು ಸ್ವೀಕರಿಸುವುದಾಗಿ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಇರಾನ್ ಮೇಲೆ ಮತ್ತೆ ಇಸ್ರೇಲ್ ಭೀಕರ ದಾಳಿ: ಖಮೇನಿಗೂ ಸದ್ದಾಂ ಹುಸೇನ್ ಗತಿಯಾಗುತ್ತಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಮುಂದಿನ ಸುದ್ದಿ
Show comments