Webdunia - Bharat's app for daily news and videos

Install App

ಮಾಜಿ ಸಿಎಂ ಮಾಯಾವತಿ ವೇಶ್ಯೆಗಿಂತಲೂ ಕೀಳು: ಬಿಜೆಪಿ ಮುಖಂಡ

Webdunia
ಬುಧವಾರ, 20 ಜುಲೈ 2016 (19:35 IST)
ಬಹಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿಧಾನಸಭಾ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದು ಹೆಚ್ಚಿನ ಮೊತ್ತ ನೀಡಿದವರಿಗೆ ಟಿಕೆಟ್ ನೀಡುತ್ತಿದ್ದಾರೆ. ಅವರು ವೇಶ್ಯೆಗಿಂತ ಕಡೆಯಾಗಿದ್ದಾರೆ ಎಂದು ಉತ್ತರಪ್ರದೇಶದ ಬಿಜೆಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ನೀಡಿದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ.
 
ಬಹುಜನ ಸಮಾಜದ ಸಂಸ್ಥಾಪಕ ಕಾನ್ಶಿರಾಮ್ ಅವರ ಸಿದ್ದಾಂತಗಳನ್ನು ಮೂಲೆಗೆ ತಳ್ಳಿುರುವ ಮಾಯಾವತಿ, ಟಿಕೆಟ್ ಹಣಕ್ಕಾಗಿ ಮಾರಾಟ ಮಾಡುವುದು ನೋಡಿದಲ್ಲಿ ಆಕೆ ವೇಶ್ಯೆಗಿಂತ ಕೀಳಾಗಿದ್ದಾಳೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಇಂದು ಬೆಳಿಗ್ಗೆ 1 ಕೋಟಿ ರೂಪಾಯಿಗೆ ಟಿಕೆಟ್ ಮಾರಾಟ ಮಾಡಿದರೆ, ಎರಡು ಗಂಟೆಗಳ ನಂತರ ಅದೇ ಟಿಕೆಟ್ 2 ಕೋಟಿಗೆ ಮಾರಾಟ ಮಾಡುತ್ತಾರೆ. ಮತ್ತದೇ ಟಿಕೆಟ್‌ನ್ನು 3 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ ಎಂದು ಕಿಡಿಕಾರಿದ್ದಾರೆ. 
 
ಮಾಜಿ ಮುಖ್ಯಮಂತ್ರಿ ಮಾಯಾವತಿಯವರನ್ನು ವೇಶ್ಯೆಗಿಂತ ಕೀಳು ಎಂದು ಹೇಳಿರುವ ಬಿಜೆಪಿ ಮುಖಂಡನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
 
ಬಹಜನ ಸಮಾಜ ಪಕ್ಷದ ಬೆಳವಣಿಗೆಗಳನ್ನು ಸಹಿಸಿದ ಬಿಜೆಪಿ ಇಂತಹ ಅಸಭ್ಯ ಹೇಳಿಕೆಗಳನ್ನು ನೀಡುವಂತೆ ಪಕ್ಷದ ಮುಖಂಡರಿಗೆ ಪ್ರೊತ್ಸಾಹ ನೀಡುತ್ತಿದೆ ಎಂದು ಮಾಜಿ ಸಿಎಂ ಮಾಯಾವತಿ ತಿರುಗೇಟು ನೀಡಿದ್ದಾರೆ.
 
ಬಿಜೆಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ಮಾಯಾವತಿಯವರ ಕ್ಷಮೆ ಕೋರುವಂತೆ ಪಕ್ಷ ಆದೇಶಿಸಿದೆ. ಒಂದು ವೇಳೆ ಅವರು ಕ್ಷಮೆ ಕೋರದಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಕೇಶವ್ ಮೌರ್ಯ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ