Select Your Language

Notifications

webdunia
webdunia
webdunia
webdunia

ಸೋನಿಯಾ ಗಾಂಧಿಯನ್ನು ‘ವಿದೇಶಿ’ ಎಂದಿದ್ದಕ್ಕೆ ತನ್ನ ಪಕ್ಷದ ನಾಯಕನಿಗೆ ಮಾಯಾವತಿ ನೀಡಿದ ಶಿಕ್ಷೆಯೇನು ಗೊತ್ತಾ?!

ಸೋನಿಯಾ ಗಾಂಧಿಯನ್ನು ‘ವಿದೇಶಿ’ ಎಂದಿದ್ದಕ್ಕೆ ತನ್ನ ಪಕ್ಷದ ನಾಯಕನಿಗೆ ಮಾಯಾವತಿ ನೀಡಿದ ಶಿಕ್ಷೆಯೇನು ಗೊತ್ತಾ?!
ನವದೆಹಲಿ , ಬುಧವಾರ, 18 ಜುಲೈ 2018 (09:41 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಬಿಜೆಪಿ ವಿರುದ್ಧ ಹೋರಾಡಲು ಮುಂದಾಗಿರುವ ಮಾಯಾವತಿ ತಮ್ಮ ರಾಜಕೀಯ ಸ್ನೇಹಿತೆ ಸೋನಿಯಾ ಗಾಂಧಿ ವಿರುದ್ಧ ತಪ್ಪಾಗಿ ಮಾತನಾಡಿದ್ದಕ್ಕೆ ತಮ್ಮ ಪಕ್ಷದ ನಾಯಕನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.

‘ರಾಹುಲ್ ಗಾಂಧಿ ತಮ್ಮ ತಂದೆಗಿಂತ ತಾಯಿ ಸೋನಿಯಾರನ್ನೇ ಹೆಚ್ಚು ಹೋಲುತ್ತಾರೆ. ಸೋನಿಯಾ ವಿದೇಶಿ. ಹಾಗಾಗಿ ರಾಹುಲ್ ಪ್ರಧಾನಿಯಾಗಲು ಸಾಧ್ಯವಿಲ್ಲ’ ಎಂದು ಮಾಯಾವತಿ ಅವರ ಬಿಎಸ್ ಪಿ ಪಕ್ಷದ ರಾಷ್ಟ್ರೀಯ ಸಂಯೋಜಕ ಜೈ ಪ್ರಕಾಶ್ ಸಿಂಗ್ ಹೇಳಿಕೆ ನೀಡಿದ್ದರು.

ಜೈ ಪ್ರಕಾಶ್ ಸಿಂಗ್ ವಿವಾದಿತ ಹೇಳಿಕೆಗೆ ಕ್ರುದ್ಧರಾಗಿರುವ ಮಾಯಾವತಿ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.  ಬಿಎಸ್ ಪಿ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಕ್ಕೆ ಈ ಶಿಕ್ಷೆ ನೀಡಲಾಗಿದೆ ಎಂದು ಮಾಯಾವತಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜತೆಗೂಡಿ ಮೈತ್ರಿಗೆ ಮುಂದಾಗಿರುವ ಬೆನ್ನಲ್ಲೇ ತಮ್ಮ ಪಕ್ಷದ ನಾಯಕನ ಹೇಳಿಕೆ ಮಾಯಾವತಿ ಸಿಟ್ಟಿಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮದು ಮುಸ್ಲಿಮರ ಪಕ್ಷ ಎಂದರೇ? ರಾಹುಲ್ ಗಾಂಧಿ ಸ್ಪಷ್ಟನೆ ಕೊಟ್ಟಿದ್ದು ಹೀಗೆ!